ರಾಜ್ಯ

ನಮ್ಮ 5 ʼಗ್ಯಾರಂಟಿʼಗಳು ಸಾಮಾನ್ಯ ಜನರಿಗೆ; ಅಂಬಾನಿ-ಅದಾನಿಗೆ ಅಲ್ಲ: ಕೃಷ್ಣ ಬೈರೇಗೌಡ

ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ – ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.

ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್​​​ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

andolanait

Recent Posts

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

13 mins ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

48 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

2 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

4 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

4 hours ago