ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ – ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.
ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.
ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…