ರಾಜ್ಯ

ನಮ್ಮ 5 ʼಗ್ಯಾರಂಟಿʼಗಳು ಸಾಮಾನ್ಯ ಜನರಿಗೆ; ಅಂಬಾನಿ-ಅದಾನಿಗೆ ಅಲ್ಲ: ಕೃಷ್ಣ ಬೈರೇಗೌಡ

ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ – ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.

ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್​​​ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago