Mysore
29
moderate rain

Social Media

ಶನಿವಾರ, 19 ಅಕ್ಟೋಬರ್ 2024
Light
Dark

ನಮ್ಮ 5 ʼಗ್ಯಾರಂಟಿʼಗಳು ಸಾಮಾನ್ಯ ಜನರಿಗೆ; ಅಂಬಾನಿ-ಅದಾನಿಗೆ ಅಲ್ಲ: ಕೃಷ್ಣ ಬೈರೇಗೌಡ

ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ – ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.

ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್​​​ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ