ಬೆಂಗಳೂರು: ಮೈಕ್ರೋ ಫೈನಾನ್ಸ್ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡದಂತೆ ಸಿಎಂ ಹಾಗೂ ಸಹಕಾರ ಸಚಿವರು ಆದೇಶ ಮಾಡಿದ್ದಾರೆ. ಆದಷ್ಟು ಬೇಗ ಸುಗ್ರೀವಾಜ್ಞೆ ಜಾರಿಯಾಗುತ್ತದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯ ಸರಿಯಿಲ್ಲ. ಒಂದೆರಡು ದಿನ ವಿರಾಮ ತೆಗೆದುಕೊಂಡ ಬಳಿಕ ಅವರು ಬರುತ್ತಾರೆ. ತದನಂತರ ಸುಗ್ರೀವಾಜ್ಞೆ ಬಗ್ಗೆ ಕ್ರಮ ಜರುಗಿಸುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬಡವರನ್ನು ರಕ್ಷಣೆ ಮಾಡುವುದು ನಮ್ಮ ಗುರಿ. ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ಹೇಳುತ್ತೇನೆ. ಕಿರುಕುಳ ಗಮನಕ್ಕೆ ತರುವಂತೆ ಮನವಿ ಮಾಡುತ್ತೇನೆ. ಎಸ್ಪಿಗಳೊಂದಿಗೆ ಸಭೆ ಮಾಡುತ್ತೇವೆ. ಸುಗ್ರೀವಾಜ್ಞೆ ಆದಷ್ಟು ಬೇಗ ಜಾರಿಯಾಗುತ್ತದೆ ಎಂದು ಹೇಳಿದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…