ರಾಜ್ಯ

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು ಕಾರ್ಮಿಕ ಸಮಸ್ಯೆಗಳು ರೈತನ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ. ಈ ಸವಾಲುಗಳಿಗೆ ಉತ್ತರ ಕೊಡುವ ಶಕ್ತಿ ಇಂದಿನ ತಂತ್ರಜ್ಞಾನ ಮತ್ತು ಕೃಷಿ ಸ್ಟಾರ್ಟ್‌ಅಪ್‌ಗಳಲ್ಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಅಭಿಪ್ರಾಯ ವ್ಯಕ್ತಪಡಿಸಿದರು..

ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಅಗ್ರಿ ಸ್ಟಾರ್ಟ್ ಅಪ್ ಕ್ಲಾನ್ ಕೇವ್ 2.0 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ನಮ್ಮ ಸರ್ಕಾರ ಕೃಷಿಯನ್ನು ಕೇವಲ ಬದುಕಿನ ಮಾರ್ಗವಾಗಿ ನೋಡುವುದಿಲ್ಲ. ಅದನ್ನು ಲಾಭದಾಯಕ ಉದ್ಯಮವನ್ನಾಗಿ ರೂಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಡಿಜಿಟಲ್ ಕೃಷಿ, ಡ್ರೋನ್ ತಂತ್ರಜ್ಞಾನ, ಡೇಟಾ ಆಧಾರಿತ ಬೆಳೆ ನಿರ್ವಹಣೆ, ಮೌಲ್ಯವರ್ಧನೆ ಮತ್ತು ನೇರ ಮಾರುಕಟ್ಟೆ ವ್ಯವಸ್ಥೆಗಳಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು..

ಇಂದು ದೇಶದಲ್ಲಿ ಸಾವಿರಾರು Agri Startups ಹುಟ್ಟಿಕೊಂಡಿವೆ. ಅದರಲ್ಲೂ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಆಗಿ ಮುಂಚೂಣಿಯಲ್ಲಿದೆ. ಯುವಕರು “ಉದ್ಯೋಗ ಹುಡುಕುವವರು” ಆಗದೆ, “ಉದ್ಯೋಗ ಸೃಷ್ಟಿಸುವವರು” ಆಗಬೇಕು ಎಂಬುದು ನಮ್ಮ ಆಶಯ ಎಂದು ಸಚಿವರು ತಿಳಿಸಿದರು..

ರೈತ ಉತ್ಪಾದಕರ ಸಂಘಗಳು (FPOs), ಕೃಷಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಯುವ ಉದ್ಯಮಿಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಗ್ರಾಮೀಣ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ಸಾಧ್ಯ.

ರಾಜ್ಯದ ಕೃಷಿ ಇಲಾಖೆ ರೈತರ ಆದಾಯ ಹೆಚ್ಚಿಸುವುದು, ನವೀನ ತಂತ್ರಜ್ಞಾನವನ್ನು ಗ್ರಾಮ ಮಟ್ಟಕ್ಕೆ ತಲುಪಿಸುವುದು ಮತ್ತು ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಅವಕಾಶ ಸೃಷ್ಟಿಸುವುದಕ್ಕೆ ಬದ್ಧವಾಗಿದೆ ಎಂದು ಹೇಳಿದರು..

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago