ಕೊಪ್ಪಳ: ಕಾರ್ಖಾನೆ ಸ್ಥಾಪನೆಗಿಂತ ನಮಗೆ ರೈತರ ಹಾಗೂ ಜನರ ಆರೋಗ್ಯ ರಕ್ಷಣೆ ಮುಖ್ಯ. ಜನಧ್ವನಿಗೆ ನಮ್ಮ ಸರ್ಕಾರ ಬೆಲೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಂದು (ಫೆ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಬಲ್ಟೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್ಪಿಎಲ್) ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಜನರ ವಿರೋಧವಿದ್ದು, ಕಾರ್ಖಾನೆ ಸ್ಥಾಪನೆಗಿಂತ ಜನರ ಆರೋಗ್ಯ ರಕ್ಷಣೆಯೇ ಮುಖ್ಯ ಎಂದು ಹೇಳಿದರು.
ಕೆಲವರು ಕಾರ್ಖಾನೆ ಬೇಕು ಎಂದು ಹೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಕಾರ್ಖಾನೆ ವಿಚಾರದಲ್ಲಿ ನಮ್ಮ ಸರ್ಕಾರದ ದ್ವಂದ್ವ ನಿಲುವಿನ ಪ್ರಶ್ನೆಯೇ ಇಲ್ಲ ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುವೆ ಎಂದು ತಿಳಿಸಿದರು.
ಕಾರ್ಖಾನೆ ಸ್ಥಾಪನೆಗಿಂತ ರೈತರ ಹಿತವೇ ಮುಖ್ಯ. ಈ ಬಗ್ಗೆ ಕೊಪ್ಪಳ ಶಾಸಕ ರಾಘವೇಂದ್ರ, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಹಿರಿಯರಾದ ಬಸವರಾಜ ರಾಯರೆಡ್ಡಿ ಎಲ್ಲರೂ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇವೆ ಎಂದರು.
ಹಾಗೆಯೇ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳಿಂದ ದೂಳು ಬರುತ್ತಿದ್ದರೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…