ರಾಜ್ಯ

ಜನಧ್ವನಿಗೆ ನಮ್ಮ ಸರ್ಕಾರ ಬೆಲೆ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಕಾರ್ಖಾನೆ ಸ್ಥಾಪನೆಗಿಂತ ನಮಗೆ ರೈತರ ಹಾಗೂ ಜನರ ಆರೋಗ್ಯ ರಕ್ಷಣೆ ಮುಖ್ಯ. ಜನಧ್ವನಿಗೆ ನಮ್ಮ ಸರ್ಕಾರ ಬೆಲೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಇಂದು (ಫೆ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಬಲ್ಟೋಟಾ ಸ್ಟೀಲ್‌ ಮತ್ತು ಪವರ್‌ ಲಿಮಿಟೆಡ್‌ (ಬಿಎಸ್‌ಪಿಎಲ್‌) ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಜನರ ವಿರೋಧವಿದ್ದು, ಕಾರ್ಖಾನೆ ಸ್ಥಾಪನೆಗಿಂತ ಜನರ ಆರೋಗ್ಯ ರಕ್ಷಣೆಯೇ ಮುಖ್ಯ ಎಂದು ಹೇಳಿದರು.

ಕೆಲವರು ಕಾರ್ಖಾನೆ ಬೇಕು ಎಂದು ಹೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಕಾರ್ಖಾನೆ ವಿಚಾರದಲ್ಲಿ ನಮ್ಮ ಸರ್ಕಾರದ ದ್ವಂದ್ವ ನಿಲುವಿನ ಪ್ರಶ್ನೆಯೇ ಇಲ್ಲ ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುವೆ ಎಂದು ತಿಳಿಸಿದರು.

ಕಾರ್ಖಾನೆ ಸ್ಥಾಪನೆಗಿಂತ ರೈತರ ಹಿತವೇ ಮುಖ್ಯ. ಈ ಬಗ್ಗೆ ಕೊಪ್ಪಳ ಶಾಸಕ ರಾಘವೇಂದ್ರ, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಹಿರಿಯರಾದ ಬಸವರಾಜ ರಾಯರೆಡ್ಡಿ ಎಲ್ಲರೂ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇವೆ ಎಂದರು.

ಹಾಗೆಯೇ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳಿಂದ ದೂಳು ಬರುತ್ತಿದ್ದರೆ ನೋಟಿಸ್‌ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago