ರಾಜ್ಯ

ಇಲ್ಲಿರುವ ರಾಮನಲ್ಲಿಯೇ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿರಂಡಹಳ್ಳಿ ಗ್ರಾಮದಲ್ಲಿ ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ದೇವಾಲಯದಲ್ಲಿ ಸೀತಾ-ರಾಮ, ಲಕ್ಷ್ಮಣ ಹಾಗೂ 33 ಅಡಿ ಆಂಜನೇಯ ದೇವರ ಪ್ರತಿಷ್ಠಾಪನೆ ಮಾಡಲಾಗಿದ್ದು, ಈ ರಾಮ ಮಂದಿರ ಉದ್ಘಾಟನೆ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ ಎಂದಿರುವ ಸಿಎಂ, ಗಾಂಧೀಜಿ ಕೂಡಾ ರಾಮಭಕ್ತರು ಎಂದು ನೆನೆದರು.

ಇನ್ನು ರಾಮ ಮಂದಿರ ಉದ್ಘಾಟನೆ ದಿನದಂದು ರಜೆ ನೀಡದ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ರಜೆ ನೀಡಿದೆಯಾ?. ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ದೆಹಲಿ, ಕೇರಳ, ಪಶ್ಚಿಮ ಬಂಗಾಳದಲ್ಲಿ ರಜೆ ನೀಡಲಾಗಿದೆಯಾ ಎಂದು ಪ್ರಶ್ನಿಸಿದರು.

ಯಾವತ್ತು ನಾನು ದೇವರ ಅಸ್ಥಿತ್ವವನ್ನು ವಿರೋಧ ಮಾಡಿಲ್ಲ: ಶ್ರೀರಾಮ ದೇಗುಲ ಉದ್ಘಾಟನೆಯ ಬಳಿಕ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಶ್ರೀರಾಮ ಚಂದ್ರ, ಸೀತಾದೇವಿ, ಲಕ್ಷ್ಮಣ, ಆಂಜನೇಯ ಇವರು ಮೂರ್ತಿಗಳುಳ್ಳ ಮೂರ್ತಿ ಪ್ರತಿಷ್ಠಾನೆಯಲ್ಲಿ ಸಂತೋಷದಿಂದ ಭಾಗವಹಿಸಿದ್ದೀವಿ. ದೇಶದ ಎಲ್ಲಾ ಜನರು ರಾಮನನ್ನು ಪೂಜಿಸುತ್ತಾರೆ. ರಾಜ್ಯದ ಹಳ್ಳಿಗಳಲ್ಲಿ ರಾಮನ ದೇವಾಲಯವಿದೆ. ನಮ್ಮೂರಿನಲ್ಲಿ ನಾನು ರಾಮಮಂದಿರ ಕಟ್ಟಿಸಿದ್ದೇನೆ. ಯಾವತ್ತು ಕೂಡಾ ನಾನು ದೇವರ ಅಸ್ಥಿತ್ವವನ್ನು ವಿರೋಧ ಮಾಡಿಲ್ಲ. ನಾನು ಆಸ್ತಿಕನೇ, ನಾಸ್ತಿಕನಲ್ಲ ಎಂದು ಹೇಳಿಕೆ ನೀಡಿದ್ದಾರೆ.

ದೇವನೊಬ್ಬ, ನಾಮ ಹಲವು ಅಂತ ಹೇಳ್ತಾರೆ. ಕೆಲವರು ಈಶ್ವರ, ಆಂಜನೇಯ, ಕೃಷ್ಣಾ, ಚಾಂಮುಂಡಿ, ತಿಮ್ಮಪ್ಪ ರಾಮನನ್ನ ಪೂಜಿಸುತ್ತಾರೆ. ಹೀಗೆ ಬೇರೆಬೇರೆ ಹೆಸರುಗಳನ್ನ ದೇವರನ್ನ ಕರೆದು ಪೂಜಿಸುತ್ತಿರುವುದು ಅನಾದಿ ಕಾಲದಿಂದಲೂ ಬಂದಿದೆ. ರಾಮಾಯಣ ನಮಗೆ ಆದರ್ಶ ಕೊಟ್ಟಿದೆ ಎಂದರು.

ರಾಮ ರಾಜ್ಯದ ಕನಸನ್ನು ಗಾಂಧೀಜಿಯವರು ಕಂಡಿದ್ದರು. ರಾಮರಾಜ್ಯ ಎಂದರೆ ಕುವೆಂಪು ಅವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನು ಬಯಸುತ್ತದೆ. ನಮ್ಮ ಸಂವಿಧಾನದಲ್ಲಿ ಸಹಿಷ್ಣುತೆ, ಸಹಬಾಳ್ವೆ ಎಂದು ಸ್ಪಷ್ಟವಾಗಿ ಬರೆದುಕೊಂಡಿದ್ದೇವೆ. ಎಲ್ಲರೂ ಮನುಷ್ಯರಾಗಿ ಪ್ರೀತಿ ವಿಶ್ವಾಸದಿಂದ ಬಾಳಬೇಕು. ಇದೇ ಅಂಶಗಳನ್ನು ರಾಮಾಯಣ ಮತ್ತು ಮಹಾಭಾರತದಲ್ಲಿ ಉಲ್ಲೇಖಿಸಿರುವುದು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

andolanait

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

10 mins ago

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

41 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

54 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

5 hours ago