ರಾಜ್ಯ

ಇಲ್ಲಿರುವ ರಾಮನಲ್ಲಿಯೇ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿರಂಡಹಳ್ಳಿ ಗ್ರಾಮದಲ್ಲಿ ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ದೇವಾಲಯದಲ್ಲಿ ಸೀತಾ-ರಾಮ, ಲಕ್ಷ್ಮಣ ಹಾಗೂ 33 ಅಡಿ ಆಂಜನೇಯ ದೇವರ ಪ್ರತಿಷ್ಠಾಪನೆ ಮಾಡಲಾಗಿದ್ದು, ಈ ರಾಮ ಮಂದಿರ ಉದ್ಘಾಟನೆ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ ಎಂದಿರುವ ಸಿಎಂ, ಗಾಂಧೀಜಿ ಕೂಡಾ ರಾಮಭಕ್ತರು ಎಂದು ನೆನೆದರು.

ಇನ್ನು ರಾಮ ಮಂದಿರ ಉದ್ಘಾಟನೆ ದಿನದಂದು ರಜೆ ನೀಡದ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ರಜೆ ನೀಡಿದೆಯಾ?. ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ದೆಹಲಿ, ಕೇರಳ, ಪಶ್ಚಿಮ ಬಂಗಾಳದಲ್ಲಿ ರಜೆ ನೀಡಲಾಗಿದೆಯಾ ಎಂದು ಪ್ರಶ್ನಿಸಿದರು.

ಯಾವತ್ತು ನಾನು ದೇವರ ಅಸ್ಥಿತ್ವವನ್ನು ವಿರೋಧ ಮಾಡಿಲ್ಲ: ಶ್ರೀರಾಮ ದೇಗುಲ ಉದ್ಘಾಟನೆಯ ಬಳಿಕ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಶ್ರೀರಾಮ ಚಂದ್ರ, ಸೀತಾದೇವಿ, ಲಕ್ಷ್ಮಣ, ಆಂಜನೇಯ ಇವರು ಮೂರ್ತಿಗಳುಳ್ಳ ಮೂರ್ತಿ ಪ್ರತಿಷ್ಠಾನೆಯಲ್ಲಿ ಸಂತೋಷದಿಂದ ಭಾಗವಹಿಸಿದ್ದೀವಿ. ದೇಶದ ಎಲ್ಲಾ ಜನರು ರಾಮನನ್ನು ಪೂಜಿಸುತ್ತಾರೆ. ರಾಜ್ಯದ ಹಳ್ಳಿಗಳಲ್ಲಿ ರಾಮನ ದೇವಾಲಯವಿದೆ. ನಮ್ಮೂರಿನಲ್ಲಿ ನಾನು ರಾಮಮಂದಿರ ಕಟ್ಟಿಸಿದ್ದೇನೆ. ಯಾವತ್ತು ಕೂಡಾ ನಾನು ದೇವರ ಅಸ್ಥಿತ್ವವನ್ನು ವಿರೋಧ ಮಾಡಿಲ್ಲ. ನಾನು ಆಸ್ತಿಕನೇ, ನಾಸ್ತಿಕನಲ್ಲ ಎಂದು ಹೇಳಿಕೆ ನೀಡಿದ್ದಾರೆ.

ದೇವನೊಬ್ಬ, ನಾಮ ಹಲವು ಅಂತ ಹೇಳ್ತಾರೆ. ಕೆಲವರು ಈಶ್ವರ, ಆಂಜನೇಯ, ಕೃಷ್ಣಾ, ಚಾಂಮುಂಡಿ, ತಿಮ್ಮಪ್ಪ ರಾಮನನ್ನ ಪೂಜಿಸುತ್ತಾರೆ. ಹೀಗೆ ಬೇರೆಬೇರೆ ಹೆಸರುಗಳನ್ನ ದೇವರನ್ನ ಕರೆದು ಪೂಜಿಸುತ್ತಿರುವುದು ಅನಾದಿ ಕಾಲದಿಂದಲೂ ಬಂದಿದೆ. ರಾಮಾಯಣ ನಮಗೆ ಆದರ್ಶ ಕೊಟ್ಟಿದೆ ಎಂದರು.

ರಾಮ ರಾಜ್ಯದ ಕನಸನ್ನು ಗಾಂಧೀಜಿಯವರು ಕಂಡಿದ್ದರು. ರಾಮರಾಜ್ಯ ಎಂದರೆ ಕುವೆಂಪು ಅವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನು ಬಯಸುತ್ತದೆ. ನಮ್ಮ ಸಂವಿಧಾನದಲ್ಲಿ ಸಹಿಷ್ಣುತೆ, ಸಹಬಾಳ್ವೆ ಎಂದು ಸ್ಪಷ್ಟವಾಗಿ ಬರೆದುಕೊಂಡಿದ್ದೇವೆ. ಎಲ್ಲರೂ ಮನುಷ್ಯರಾಗಿ ಪ್ರೀತಿ ವಿಶ್ವಾಸದಿಂದ ಬಾಳಬೇಕು. ಇದೇ ಅಂಶಗಳನ್ನು ರಾಮಾಯಣ ಮತ್ತು ಮಹಾಭಾರತದಲ್ಲಿ ಉಲ್ಲೇಖಿಸಿರುವುದು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

8 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

9 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

10 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

11 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

12 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

13 hours ago