ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿರಂಡಹಳ್ಳಿ ಗ್ರಾಮದಲ್ಲಿ ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ದೇವಾಲಯದಲ್ಲಿ ಸೀತಾ-ರಾಮ, ಲಕ್ಷ್ಮಣ ಹಾಗೂ 33 ಅಡಿ ಆಂಜನೇಯ ದೇವರ ಪ್ರತಿಷ್ಠಾಪನೆ ಮಾಡಲಾಗಿದ್ದು, ಈ ರಾಮ ಮಂದಿರ ಉದ್ಘಾಟನೆ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ ಎಂದಿರುವ ಸಿಎಂ, ಗಾಂಧೀಜಿ ಕೂಡಾ ರಾಮಭಕ್ತರು ಎಂದು ನೆನೆದರು.
ಇನ್ನು ರಾಮ ಮಂದಿರ ಉದ್ಘಾಟನೆ ದಿನದಂದು ರಜೆ ನೀಡದ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ರಜೆ ನೀಡಿದೆಯಾ?. ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ದೆಹಲಿ, ಕೇರಳ, ಪಶ್ಚಿಮ ಬಂಗಾಳದಲ್ಲಿ ರಜೆ ನೀಡಲಾಗಿದೆಯಾ ಎಂದು ಪ್ರಶ್ನಿಸಿದರು.
ಯಾವತ್ತು ನಾನು ದೇವರ ಅಸ್ಥಿತ್ವವನ್ನು ವಿರೋಧ ಮಾಡಿಲ್ಲ: ಶ್ರೀರಾಮ ದೇಗುಲ ಉದ್ಘಾಟನೆಯ ಬಳಿಕ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಶ್ರೀರಾಮ ಚಂದ್ರ, ಸೀತಾದೇವಿ, ಲಕ್ಷ್ಮಣ, ಆಂಜನೇಯ ಇವರು ಮೂರ್ತಿಗಳುಳ್ಳ ಮೂರ್ತಿ ಪ್ರತಿಷ್ಠಾನೆಯಲ್ಲಿ ಸಂತೋಷದಿಂದ ಭಾಗವಹಿಸಿದ್ದೀವಿ. ದೇಶದ ಎಲ್ಲಾ ಜನರು ರಾಮನನ್ನು ಪೂಜಿಸುತ್ತಾರೆ. ರಾಜ್ಯದ ಹಳ್ಳಿಗಳಲ್ಲಿ ರಾಮನ ದೇವಾಲಯವಿದೆ. ನಮ್ಮೂರಿನಲ್ಲಿ ನಾನು ರಾಮಮಂದಿರ ಕಟ್ಟಿಸಿದ್ದೇನೆ. ಯಾವತ್ತು ಕೂಡಾ ನಾನು ದೇವರ ಅಸ್ಥಿತ್ವವನ್ನು ವಿರೋಧ ಮಾಡಿಲ್ಲ. ನಾನು ಆಸ್ತಿಕನೇ, ನಾಸ್ತಿಕನಲ್ಲ ಎಂದು ಹೇಳಿಕೆ ನೀಡಿದ್ದಾರೆ.
ದೇವನೊಬ್ಬ, ನಾಮ ಹಲವು ಅಂತ ಹೇಳ್ತಾರೆ. ಕೆಲವರು ಈಶ್ವರ, ಆಂಜನೇಯ, ಕೃಷ್ಣಾ, ಚಾಂಮುಂಡಿ, ತಿಮ್ಮಪ್ಪ ರಾಮನನ್ನ ಪೂಜಿಸುತ್ತಾರೆ. ಹೀಗೆ ಬೇರೆಬೇರೆ ಹೆಸರುಗಳನ್ನ ದೇವರನ್ನ ಕರೆದು ಪೂಜಿಸುತ್ತಿರುವುದು ಅನಾದಿ ಕಾಲದಿಂದಲೂ ಬಂದಿದೆ. ರಾಮಾಯಣ ನಮಗೆ ಆದರ್ಶ ಕೊಟ್ಟಿದೆ ಎಂದರು.
ರಾಮ ರಾಜ್ಯದ ಕನಸನ್ನು ಗಾಂಧೀಜಿಯವರು ಕಂಡಿದ್ದರು. ರಾಮರಾಜ್ಯ ಎಂದರೆ ಕುವೆಂಪು ಅವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನು ಬಯಸುತ್ತದೆ. ನಮ್ಮ ಸಂವಿಧಾನದಲ್ಲಿ ಸಹಿಷ್ಣುತೆ, ಸಹಬಾಳ್ವೆ ಎಂದು ಸ್ಪಷ್ಟವಾಗಿ ಬರೆದುಕೊಂಡಿದ್ದೇವೆ. ಎಲ್ಲರೂ ಮನುಷ್ಯರಾಗಿ ಪ್ರೀತಿ ವಿಶ್ವಾಸದಿಂದ ಬಾಳಬೇಕು. ಇದೇ ಅಂಶಗಳನ್ನು ರಾಮಾಯಣ ಮತ್ತು ಮಹಾಭಾರತದಲ್ಲಿ ಉಲ್ಲೇಖಿಸಿರುವುದು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…