ರಾಜ್ಯ

ನಮ್ಮ ಸಂಕಲ್ಪ ಕುಟುಂಬ ರಾಜಕೀಯ ವಿರುದ್ಧ ಇರಬೇಕು: ಪ್ರೀತಂ ಗೌಡ!

ಪಾಂಡವಪುರ: ಮೊದಲು ನಾವು ನೆಂಟಸ್ಥಿಕೆಯನ್ನು ಬಿಡಬೇಕು. ಮೊದಲು ಪಕ್ಷಬೇಕು, ಅದಕ್ಕೂ ಮೊದಲು ದೇಶ ಬೇಕು ಎನ್ನಬೇಕು. ಇದಕ್ಕೆ ನಮ್ಮೆಲ್ಲರ ಮನಸ್ಥಿತಿ ಒಂದೇ ಆಗಿರಬೇಕು. ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ಮಾಜಿ ಶಾಸಕ ಪ್ರೀತಂ ಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

ನಗರದಲ್ಲಿಂದು ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಯಕ್ತಿಕ ನೆಂಟಸ್ಥಿಕೆ ಮೀರಿ ಪಕ್ಷ ಬೇಕು. ಪಕ್ಷಕ್ಕಿಂತ ನಮಗೆ ದೇಶ ಮುಖ್ಯ ಎಂಬುದಾಗಿರಬೇಕು. ಇದಕ್ಕೆ ನಮ್ಮೆಲ್ಲರ ಮನಸ್ಥಿತಿ ಒಂದೇ ಆಗಿರಬೇಕು. ದೇಶ, ರಾಜ್ಯ ಮತ್ತು ಮಂಡ್ಯ ಸೇರಿದಂತೆ ಎಲ್ಲಾ ಕಡೆ ಕುಟುಂಬ ರಾಜಕಾರಣ ನಡೆಯುತ್ತಿದ್ದು, ಕುಟುಂಬ ರಾಜಕಾರಣದ ವಿರುದ್ಧ ನಮ್ಮ ಸಂಕಲ್ಪ ಇರುತ್ತದೆ. ಪ್ರಾದೇಶಿಕ ಪಕ್ಷಗಳಲ್ಲಿ ನಾವು ಕುಟುಂಬ ರಾಜಕಾರಣ ಕಾಣುತ್ತೇವೆ. ನಮ್ಮ ರಾಜ್ಯದ ಬಗ್ಗೆ ಹೇಳುವುದು ಬೇಡ, ಅದು ನಿಮಗೆ ಗೊತ್ತಿದೆ. ಪರೋಕ್ಷವಾಗಿ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದರು.

ಇನ್ನು ಲೋಕಸಭಾ ಚುನಾವಣೆಗೆ ಟಿಕೆಟ್‌ ಹಂಚಿಕೆಗೆ ಸಂಬಂಧಸಿದಂತೆ, ಹಾಸನ ಮತ್ತು ಮಂಡ್ಯದಲ್ಲಿ ಜೆಡಿಎಸ್‌ ಟಿಕೆಟ್‌ ಕೇಳಿದೆ, ಆದರೆ ಅದು ಅಂತಿಮವಾಗಿಲ್ಲ. ಒಂದು ವೇಳೆ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟು ಕೊಡುವುದಾದರೆ ಅಭ್ಯರ್ಥಿ ಆಯ್ಕೆಯಲ್ಲಿ ಕಾರ್ಯಕರ್ತರ ಒಪ್ಪಿಗೆ ಪಡೆಯಬೇಕು ಎಂದು ಹೇಳಿದರು.

ನಮಗೆ ಲೋಕಸಭೆ ಚುನಾವಣೆ ಗೆಲುವು ಮಾನದಂಡ ಅಷ್ಟೆ. ಸರ್ವೇ ರಿಪೋರ್ಟ್ ಯಾರಿಗೆ ಬರುತ್ತೆ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಮುಂದೆ ಪಕ್ಷ ಬೆಳೆಯಬೇಕು ಅಂದರೇ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಹಾಸನ, ಮಂಡ್ಯ ಸೇರಿ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಹೀಗಾಗಿ ನಮ್ಮ ಕಾರ್ಯಕರ್ತರು ಮಂಡ್ಯ ಕ್ಷೇತ್ರವನ್ನು ಕೇಳುತ್ತಿದ್ದಾರೆ. ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅವರ ಅಭಿಪ್ರಾಯ ಸಂಗ್ರಹಿಸಿ ನಾಯಕರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಬಿಜೆಪಿ ಗೆದ್ದಿರಲಿಲ್ಲ. ಕೆ.ಆರ್‌.ಪೇಟೆಯಲ್ಲಿ ನಾರಾಯಣಗೌಡ ಮೊದಲ ಬಾರಿಗೆ ಗೆದ್ದರು. ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಬಿಜೆಪಿ ಪಕ್ಷ ಕಟ್ಟೋಣ. ಮೈತ್ರಿಯಾಗಿದೆ ಟಿಕೆಟ್ ಬಿಟ್ಟುಕೊಡಬೇಕು ಎಂದು ಕಾರ್ಯಕರ್ತರು ಕುಂದುವ ಅವಶ್ಯಕತೆ ಇಲ್ಲ. ಬಿಜೆಪಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ ಎಂಬುವುದರ ಬಗ್ಗೆ ತೀರ್ಮಾನವಾಗಿಲ್ಲ ಎಂದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago