ರಾಜ್ಯ

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

MGNREGA ವನ್ನು ವಿಬಿಜಿರಾಮ್ ಜಿ ಬದಲಾವಣೆ- ಸರ್ಕಾರದ ತೀವ್ರ ವಿರೋಧ
ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. MGNREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿರಾಮ್ ಜಿ ( ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ ಎಂದರು.

ಕೆಲಸದ ಹಕ್ಕು ಖಾತ್ರಿಪಡಿಸುವ MGNREGA
ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ, ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗುತ್ತದೆ ಎಂದರು.

ವಿಬಿ ಜಿ ರಾಮ್ ಜಿ : ವರ್ಷ ಪೂರ್ತಿ ಕೆಲಸದ ಭರವಸೆ ಇಲ್ಲ
ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೇ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.

ಹೊಸ ಕಾಯ್ದೆಗೆ ವಿರೋಧಪಕ್ಷದವರಿಂದ ಉದ್ದೇಶಪೂರ್ವಕ ಸಮರ್ಥನೆ
ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಯಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು ಎಂದರು.

ಹೊಸ ಕಾಯ್ದೆ ರದ್ದುಗೊಳ್ಳಲೇಬೇಕು
MGNREGA ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದೇ ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

23 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago