ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ -ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯ ಮಾಡಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ದೇಶದ ಎಲ್ಲಾ ರಾಜ್ಯಗಳಿಗಿಂತ ನಮ್ಮ ರಾಜ್ಯವೇ ಅತಿ ಅಧಿಕವಾಗಿ ತೆರಿಗೆ ಪಾವತಿಸುತ್ತದೆ. ಆದರೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಬಾರಿಯೂ ನಮಗೆ ಅನ್ಯಾಯ ಮಾಡುತ್ತಿದೆ. ಅಲ್ಲದೇ ನಮ್ಮ ರಾಜ್ಯದ ತೆರಿಗೆ ಹಣವನ್ನು ದೆಹಲಿ, ಉತ್ತರ ಪ್ರದೇಶ, ಹಾಗೂ ಬಿಹಾರಕ್ಕೆ ನೀಡುತ್ತಿದ್ದಾರೆ.
ನಮ್ಮ ರಾಜ್ಯದಲ್ಲಿ ಐವರು ಕೇಂದ್ರ ಸಚಿವರು ಇದ್ದಾರೆ. ಇದರಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಸಹ ಒಬ್ಬರಾಗಿದ್ದಾರೆ. ಹೀಗಿದ್ದರೂ, ಆಂಧ್ರಕ್ಕಿಂತಲೂ ಕಡಿಮೆ ಮಟ್ಟದಲ್ಲಿ ನಮ್ಮ ರಾಜ್ಯ ತೆರಿಗೆ ಹಣವನ್ನು ನೀಡಿದ್ದಾರೆ. ನೆರೆ ರಾಜ್ಯಗಳಿಗಿಂತಲೂ ನಾವೂ ಕೀಳಾ? ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯದ ಕೇಂದ್ರ ಸಚಿವರು ತೆರಿಗೆ ಹಣದಲ್ಲಿ ನ್ಯಾಯ ಕೇಳದೇ ನಮ್ಮಲ್ಲೇ ಇದ್ದುಕೊಂಡು ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

15 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

27 mins ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

30 mins ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

38 mins ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

42 mins ago

ನಂಜೀಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಮಹದೇಶ್ವರಸ್ವಾಮಿ ಕೊಂಡೋತ್ಸವ

ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ…

45 mins ago