ರಾಜ್ಯ

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 22 ಮಂದಿ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.

22 ಮಂದಿ ಪೊಲೀಸರ ಪೈಕಿ ಇಬ್ಬರು ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಹಾಗೂ 20 ಮಂದಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುತ್ತಾರೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು:
ಎಡಿಜಿಪಿ ದೇವಜ್ಯೋತಿ ರೇ ಹಾಗೂ ಹಲಸೂರು ಉಪವಿಭಾಗದ ಎಸಿಪಿ ರಂಗಪ್ಪ ಅವರಿಗೆ ಲಭಿಸಿದೆ.

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:
ಬೆಳಗಾವಿ ಐಜಿಪಿ ಡಾ.ಚೇತನ್‌ಸಿಂಗ್‌ ರಾಥೋಡ್‌, ಮಂಗಳೂರು ಐಜಿಪಿ ಅಮಿತ್‌ ಸಿಂಗ್‌, ಮೈಸೂರು ನಗರ ಪೊಲೀಸ್‌‍ ಆಯುಕ್ತ ಸೀಮಾ ಲಾಟ್ಕರ್‌, ಗೃಹ ರಕ್ಷಕ ದಳದ ಡಿಐಜಿಪಿ ಸವಿತಾ, ಕಲಬುರಗಿ ಡಿಐಜಿಪಿ ಪುಟ್ಟಮಾದಯ್ಯ.

ಬಳ್ಳಾರಿ ಜಿಲ್ಲೆ ಅಡಿಷನಲ್‌ ಎಸ್‌‍ಪಿ-2 ನವೀನ್‌ಕುಮಾರ್‌, ಬೆಂಗಳೂರು ನಗರ ಅಪರಾಧ-2 ಡಿಸಿಪಿ ರಾಜ ಇಮಾಮ್‌ ಖಾಸಿಂ, ಮಂಗಳೂರು ಡಿಸಿಆರ್‌ಇ ಪೊಲೀಸ್‌‍ ಅಧೀಕ್ಷಕರು ಸೈಮನ್‌, ಬೀದರ್‌ ಲೋಕಾಯುಕ್ತ ಡಿವೈಎಸ್‌‍ಪಿ ಹನುಮಂತರಾಯ.

ಮಡಿವಾಳ ಪೊಲೀಸ್‌‍ ಠಾಣೆ ಇನ್‌ಸಪೆಕ್ಟರ್‌ ಮಹಮದ್‌, ವಿದ್ಯಾರಣ್ಯಪುರ ಪೊಲೀಸ್‌‍ ಇನ್‌ಸಪೆಕ್ಟರ್‌ ಶಿವಸ್ವಾಮಿ, ಹುಬ್ಬಳ್ಳಿ-ಧಾರವಾಡ ನಗರ ವಿದ್ಯಾಗಿರಿ ಠಾಣೆ ಇನ್‌ಸಪೆಕ್ಟರ್‌ ಮಹಮದ್‌ ರಫೀಕ್‌ ಎಂ.ತಹಸೀಲ್ದಾರ್‌, ಬೆಳಗಾವಿ ಜಿಲ್ಲೆ ಮೂಡಲಗಿ ಸರ್ಕಲ್‌ ಇನ್‌ಸಪೆಕ್ಟರ್‌ ಶ್ರೀಶೈಲ್‌ ಕೆ.ಬ್ಯಾಕೋಡ್‌, ಕೆಎಸ್‌‍ಆರ್‌ಪಿ 9ನೆ ಪಡೆಯ ಸ್ಪೆಆರ್‌ಎಸ್‌‍ಐ ಕಾಶಿನಾಥ್‌. ಮಲ್ಪೆ ಪೊಲೀಸ್‌‍ ಠಾಣೆ ಪಿಎಸ್‌‍ಐ ವೈಲೆಟ್‌ ಫೆಮಿನ್‌, ಶಿವಮೊಗ್ಗ ಪಿಎಸ್‌‍ಐ ಶಕುಂತಲಾ, ಬೆಂಗಳೂರು ನಗರ ಸಂಚಾರ ಎಎಸ್‌‍ಐ ಹರ್ಷ ನಾಗರಾಜ್‌, ಹುಳಿಮಾವು ಪೊಲೀಸ್‌‍ ಠಾಣೆ ಎಎಸ್‌‍ಐ ಸಿದ್ದರಾಜು, ಕೆಎಸ್‌‍ಆರ್‌ಪಿ ಸ್ಪೆ ಆರ್‌ಎಚ್‌ಸಿ 3ನೆ ಪಡೆಯ ದೊಡ್ಡ ಈರಪ್ಪ ಹಾಗೂ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಹೆಡ್‌ಕಾನ್‌ಸ್ಟೆಬಲ್‌ ಬಸವರಾಜ್‌ ಮ್ಯಾಗೇರಿ ಅವರು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

18 mins ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

43 mins ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

57 mins ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

1 hour ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

2 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

2 hours ago