ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 22 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.
22 ಮಂದಿ ಪೊಲೀಸರ ಪೈಕಿ ಇಬ್ಬರು ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಹಾಗೂ 20 ಮಂದಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುತ್ತಾರೆ.
ವಿಶಿಷ್ಟ ಸೇವಾ ಪದಕ ಪುರಸ್ಕೃತರು:
ಎಡಿಜಿಪಿ ದೇವಜ್ಯೋತಿ ರೇ ಹಾಗೂ ಹಲಸೂರು ಉಪವಿಭಾಗದ ಎಸಿಪಿ ರಂಗಪ್ಪ ಅವರಿಗೆ ಲಭಿಸಿದೆ.
ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:
ಬೆಳಗಾವಿ ಐಜಿಪಿ ಡಾ.ಚೇತನ್ಸಿಂಗ್ ರಾಥೋಡ್, ಮಂಗಳೂರು ಐಜಿಪಿ ಅಮಿತ್ ಸಿಂಗ್, ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಗೃಹ ರಕ್ಷಕ ದಳದ ಡಿಐಜಿಪಿ ಸವಿತಾ, ಕಲಬುರಗಿ ಡಿಐಜಿಪಿ ಪುಟ್ಟಮಾದಯ್ಯ.
ಬಳ್ಳಾರಿ ಜಿಲ್ಲೆ ಅಡಿಷನಲ್ ಎಸ್ಪಿ-2 ನವೀನ್ಕುಮಾರ್, ಬೆಂಗಳೂರು ನಗರ ಅಪರಾಧ-2 ಡಿಸಿಪಿ ರಾಜ ಇಮಾಮ್ ಖಾಸಿಂ, ಮಂಗಳೂರು ಡಿಸಿಆರ್ಇ ಪೊಲೀಸ್ ಅಧೀಕ್ಷಕರು ಸೈಮನ್, ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯ.
ಮಡಿವಾಳ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮಹಮದ್, ವಿದ್ಯಾರಣ್ಯಪುರ ಪೊಲೀಸ್ ಇನ್ಸಪೆಕ್ಟರ್ ಶಿವಸ್ವಾಮಿ, ಹುಬ್ಬಳ್ಳಿ-ಧಾರವಾಡ ನಗರ ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್ ಮಹಮದ್ ರಫೀಕ್ ಎಂ.ತಹಸೀಲ್ದಾರ್, ಬೆಳಗಾವಿ ಜಿಲ್ಲೆ ಮೂಡಲಗಿ ಸರ್ಕಲ್ ಇನ್ಸಪೆಕ್ಟರ್ ಶ್ರೀಶೈಲ್ ಕೆ.ಬ್ಯಾಕೋಡ್, ಕೆಎಸ್ಆರ್ಪಿ 9ನೆ ಪಡೆಯ ಸ್ಪೆಆರ್ಎಸ್ಐ ಕಾಶಿನಾಥ್. ಮಲ್ಪೆ ಪೊಲೀಸ್ ಠಾಣೆ ಪಿಎಸ್ಐ ವೈಲೆಟ್ ಫೆಮಿನ್, ಶಿವಮೊಗ್ಗ ಪಿಎಸ್ಐ ಶಕುಂತಲಾ, ಬೆಂಗಳೂರು ನಗರ ಸಂಚಾರ ಎಎಸ್ಐ ಹರ್ಷ ನಾಗರಾಜ್, ಹುಳಿಮಾವು ಪೊಲೀಸ್ ಠಾಣೆ ಎಎಸ್ಐ ಸಿದ್ದರಾಜು, ಕೆಎಸ್ಆರ್ಪಿ ಸ್ಪೆ ಆರ್ಎಚ್ಸಿ 3ನೆ ಪಡೆಯ ದೊಡ್ಡ ಈರಪ್ಪ ಹಾಗೂ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಹೆಡ್ಕಾನ್ಸ್ಟೆಬಲ್ ಬಸವರಾಜ್ ಮ್ಯಾಗೇರಿ ಅವರು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…