ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ.
ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಸತತವಾಗಿ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಆಗಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಪ್ರಸ್ತುತ (ಆ. 25ರಂದು) 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.
ಇದೇ ರೀತಿ ಒಳಹರಿವು ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದ್ದು, ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಜಲಾಶಯದಿಂದ ಹೊರಬಿಡಬೇಕಾಗುತ್ತದೆ. ಆದ್ದರಿಂದ ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿಯ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ.
ಅಲ್ಲದೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಇದೇ ವೇಳೆ ಕೋರಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…