ರಾಜ್ಯ

ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ ಎನ್‌ಡಿಎ ಸರ್ಕಾರ ಎರಡರಷ್ಟು ಅನುದಾನವನ್ನು ನೀಡಿದೆ. ಅಲ್ಲದೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನ ಹಂಚಿಕೆ ಬಿಡುಗಡೆ ಮಾಡುವುದನ್ನು ನಿರ್ಧರಿಸಿಲ್ಲ. ಅದರ ಬದಲಾಗಿ ಕೇಂದ್ರ ಹಣಕಾಸು ನಿಯೋಗ ನಿಗದಿಪಡಿಸಿದಷ್ಟು ಹಣವನ್ನು ಮಾತ್ರ ಕೇಂದ್ರ ನೀಡಿದೆ ಎಂದು ಹೇಳಿದರು.

ಕಳೆದ 2016-17ರ ಅವಧಿಯಲ್ಲಿ ಕೇಂದ್ರ ಹಣಕಾಸು ಆಯೋಗ ಅನುದಾನ ಹಂಚಿಕೆಯನ್ನು ನಿಗದಿಪಡಿಸಿತ್ತು. ಆಗ ಅಧಿಕಾರದಲ್ಲಿದ್ದವರು ಸಿಎಂ ಸಿದ್ದರಾಮಯ್ಯನವರೇ. ಆ ಸಂದರ್ಭದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆಯೋಗದ ಮುಂದೆ ಧ್ವನಿ ಎತ್ತದೆ ಈಗ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

5 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

1 hour ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

1 hour ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

2 hours ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

2 hours ago