ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಫೆ.5 ರಂದು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ ಅವಧಿ ಇರಲಿದೆ.
ಮಳವಳ್ಳಿ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಅವರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಬುಧವಾರ ರಾತ್ರಿ 9 ಗಂಟೆಗೆ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಶಾಂತ್ ತಮ್ಮಯ್ಯ ಅವರ ಅವಧಿ 2024ರ ನವೆಂಬರ್ನಲ್ಲಿ ಅಂತ್ಯಗೊಂಡಿತ್ತು.





