ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ ಇಂದು ವಿಧಿವಶರಾಗಿದ್ದಾರೆ.
ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನು ದಿಲ್ಲಿಗೆ ಕೊಂಡೊಯ್ದಿದ್ದರು.
ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸಿದರು. 2017ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಇವರು ಇಬ್ಬರು ಮೊಮ್ಮಕ್ಕಳು, ಓರ್ವ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇಡಿಯಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಲಿದೆ.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…