ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ.

ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ ರಾಜೀನಾಮೆ ನೀಡುತ್ತಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಸಾಹಿತ್ಯ ವಲಯದಲ್ಲಿ ಬೇರೆಯದ್ದೇ ಕಾರಣ ಇದೆ ಎಂಬ ಮಾತುಗಳು ಕೇಳೀ ಬರುತ್ತಿವೆ. ಹಿನ್ನೆಲೆಯಲ್ಲಿ ಅವರನ್ನು ನೋಡಿಕೊಳ್ಳಬೇಕಾಗಿದೆ ಹಾಗಾಗಿ ಕಸಾಪದ ಮಹತ್ವದ ಜವಾಬ್ದಾರಿ ಹೊರಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ, ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅವರ ನಡೆಯನ್ನು ವಿರೋಧಿಸಿ ಪದ್ಮಿನಿ ಅವರು ರಾಜೀನಾಮೆ ನೀಡಿದ್ದಾರೆ ಎಂದೂ ಹೇಳಲಾಗುತ್ತಿದೆ.

  1. ಕಳೆದ ಹಲವು ದಿನಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ಸಾಕಷ್ಟು ಅಸಮಾಧಾನಗಳಿಗೆ ಕಾರಣವಾಗುತ್ತಿವೆ. ಬಹಿರಂಗವಾಗಿ ಕೆಲ ಜಿಲ್ಲಾ ಸಂಘಟನೆಗಳು ಹಾಗೂ ಸಾಹಿತಿಗಳು ಮತ್ತು ಕಸಾಪದ ಹಿತ ಚಿಂತಕರು, ಅಧ್ಯಕ್ಷರು ಸರ್ವಾಧಿಕಾರಿ ದೋರಣೆ ತಳೆದಿದ್ದಾರೆ ಕೂಡಲೇ ರಾಜೀನಾಮೆ ನೀಡಬೇಕೆಂದು ಹೇಳುತ್ತಿದ್ದಾರೆ.

ಇದರ ನಡುವೆ ಕಸಾಪದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮನಿ ನಾಗರಾಜ್ ಅವರು ರಾಜೀನಾಮೆ ನೀಡುತ್ತಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

2 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

2 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

2 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

2 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago