ರಾಜ್ಯ

ಪಂಚಭೂತಗಳಲ್ಲಿ ಲೀನರಾದ ಭರತ್‌ ಭೂಷಣ್‌ ಹಾಗೂ ಮಂಜುನಾಥ್‌

ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್‌ ಹಾಗೂ ಶಿವಮೊಗ್ಗದ ಮಂಜುನಾಥ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರಾವಧರಗಳೊಂದಿಗೆ ನೆರವೇರಿಸಲಾಯಿತು.

ಭರತ್‍ಭೂಷಣ್ ಅಂತ್ಯಕ್ರಿಯೆ ಒಕ್ಕಲಿಗ ವಿಧಿವಿಧಾನದಂತೆ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ನೆರವೇರಿದರೆ, ಮಂಜುನಾಥ್ ಅವರ ಅಂತ್ಯಸಂಸ್ಕಾರವು ಶಿವಮೊಗ್ಗದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಪುತ್ರ ನೆರವೇರಿಸಿಕೊಟ್ಟರು.

ಇದಕ್ಕೂ ಮುನ್ನ ಶ್ರೀನಗರದಿಂದ ಆಗಮಿಸಿದ ಇಬ್ಬರ ಕಳೆಬರಹವನ್ನು ವಿಮಾನ ನಿಲ್ದಾಣದಲ್ಲಿ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಮತ್ತಿತರರು ಬರಮಾಡಿಕೊಂಡರು.

ಅಲ್ಲಿಂದ ನೇರವಾಗಿ ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಭರತ್ ಭೂಷಣ್ ನಿವಾಸಕ್ಕೆ ಕರೆತರಲಾಗಿತ್ತು. ಪ್ರವಾಸದಿಂದ ಮಗ ವಾಪಸ್ ಬರುವ ನಿರೀಕ್ಷೆಯಲ್ಲಿದ್ದ ಭರತ್ ಭೂಷಣ್ ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟ ದೃಶ್ಯ ಎಲ್ಲರ ಮನ ಕಲಕುವಂತಿತ್ತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಮೃತರ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಸುಜಾತಾ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

40 mins ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

46 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

52 mins ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago