ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.
ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಮಂಜುನಾಥ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರಾವಧರಗಳೊಂದಿಗೆ ನೆರವೇರಿಸಲಾಯಿತು.
ಭರತ್ಭೂಷಣ್ ಅಂತ್ಯಕ್ರಿಯೆ ಒಕ್ಕಲಿಗ ವಿಧಿವಿಧಾನದಂತೆ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ನೆರವೇರಿದರೆ, ಮಂಜುನಾಥ್ ಅವರ ಅಂತ್ಯಸಂಸ್ಕಾರವು ಶಿವಮೊಗ್ಗದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಪುತ್ರ ನೆರವೇರಿಸಿಕೊಟ್ಟರು.
ಇದಕ್ಕೂ ಮುನ್ನ ಶ್ರೀನಗರದಿಂದ ಆಗಮಿಸಿದ ಇಬ್ಬರ ಕಳೆಬರಹವನ್ನು ವಿಮಾನ ನಿಲ್ದಾಣದಲ್ಲಿ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಮತ್ತಿತರರು ಬರಮಾಡಿಕೊಂಡರು.
ಅಲ್ಲಿಂದ ನೇರವಾಗಿ ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಭರತ್ ಭೂಷಣ್ ನಿವಾಸಕ್ಕೆ ಕರೆತರಲಾಗಿತ್ತು. ಪ್ರವಾಸದಿಂದ ಮಗ ವಾಪಸ್ ಬರುವ ನಿರೀಕ್ಷೆಯಲ್ಲಿದ್ದ ಭರತ್ ಭೂಷಣ್ ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟ ದೃಶ್ಯ ಎಲ್ಲರ ಮನ ಕಲಕುವಂತಿತ್ತು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಮೃತರ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಸುಜಾತಾ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…