ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ.
ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಬಳಿಕ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರ ಮತ್ತು ಸೂಚನೆಗಳು ಶ್ಲಾಘನೀಯ. ಪೊಲೀಸ್ ಅಧಿಕಾರಿ ಚೇತನ್ ಅವರ ಸಹಕಾರವೂ ಸ್ಮರಣೀಯ ಎಂದರು.
ಶೇ.99ರಷ್ಟು ನಮ್ಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಜಮು ಕಾಶ್ಮೀರದಿಂದ ಕನ್ನಡಿಗರ ಸಹಕಾರವೂ ಅವಿಸ್ಮರಣೀಯ. 177 ಕನ್ನಡಿಗರನ್ನು ಶ್ರೀನಗರದಿಂದ ಬೆಂಗಳೂರಿಗೆ ಕರೆತರಲಾಗಿದೆ. ಇನ್ನೂ ಕೆಲವರು ಜಮ್ಮು ಮತ್ತು ಕಟ್ರದಲ್ಲಿದ್ದಾರೆ. ಅವರಿಗೆ ಈಗಾಗಲೇ ಮಾರ್ಗದರ್ಶನ ನೀಡಲಾಗಿದ್ದು, ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚಿಸಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪ್ರವಾಸದ ಯೋಜನೆ ರೂಪಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದರು.
ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿಯವರ ಸೂಚನೆಯಂತೆ ನಾನು ಯಶಸ್ವಿಯಾಗಿದ್ದೇನೆ. ಪಹಲ್ಗಾಮ್ನಲ್ಲಿ ದಾಳಿಯ ಬಳಿಕ ಅಲ್ಲಿನ ವಾತಾವರಣವನ್ನು ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ದುಗುಡ ವ್ಯಕ್ತಪಡಿಸಿದರು.
ಇದು ಅತ್ಯಂತ ಭಯಾನಕವಾದ ಅನುಭವ. ಹೆಣ್ಣುಮಕ್ಕಳ ಕಣ್ಣೆದುರೇ ಅವರ ಗಂಡನನ್ನು ಕೊಲ್ಲಲಾಗಿದೆ. ಆ ವೇಳೆ ಹೆಣ್ಣುಮಕ್ಕಳು ನಮನ್ನೂ ಕೊಲ್ಲಿ ಎಂದು ಪ್ರತಿರೋಧಿಸಿರುವ ಧೈರ್ಯ ಪ್ರದರ್ಶಿಸಿರುವುದು ವರ್ಣಿಸಲು ಸಾಧ್ಯವಿಲ್ಲ. ನಮ್ಮ ದೇಶದ ಹೆಣ್ಣು ಮಕ್ಕಳು ಮಾತ್ರ ಈ ರೀತಿ ಧೈರ್ಯ ಪ್ರದರ್ಶಿಸಲು ಸಾಧ್ಯ. ಇದನ್ನು ನಾನು ಕಣ್ಣಿನಲ್ಲಿ ನೇರವಾಗಿ ನೋಡಿಲ್ಲ. ಆದರೆ ಕೇಳಿ ತಿಳಿದುಕೊಂಡ ಪ್ರಕಾರ ಅತೀ ಘೋರವಾಗಿದೆ ಎಂದರು.
ಭದ್ರತಾ ಲೋಪದ ಬಗ್ಗೆ ಈ ಸಂದರ್ಭದಲ್ಲಿ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ನಾನು ರಾಜಕೀಯ ಬೆರೆಸಲು ಬಯಸುವುದಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಮಗ್ನನಾಗಿದ್ದೇನೆ. ನಮ್ಮ ಜೊತೆ 177 ಮಂದಿ ಬಂದಿದ್ದಾರೆ. ಉಳಿದ 13 ಮಂದಿ ಸಂಜೆಯ ವಿಮಾನದಲ್ಲಿ ಬರುತ್ತಾರೆ. ಬಾಕಿ ಇರುವವರು ನಾಳೆ ಬೆಳಿಗ್ಗೆ ವಿಮಾನದಲ್ಲಿ ಬರುತ್ತಾರೆ. ಎಲ್ಲರಿಗೂ ವಿಮಾನಗಳು ಬುಕ್ ಆಗಿವೆ ಎಂದು ತಿಳಿಸಿದರು.
ಪಾಕಿಸ್ತಾನಕ್ಕೆ ಭಾರತ ದೇಶ ತಕ್ಕ ಪ್ರತಿಕ್ರಿಯೆ ನೀಡಲಿದೆ. ಅದನ್ನು ಇಡೀ ಜಗತ್ತೇ ನೋಡುತ್ತದೆ. ನಮ್ಮ ಸೇನೆಯ ಸಾಮರ್ಥ್ಯ ಯಾವ ರೀತಿ ಉತ್ತರ ನೀಡಬೇಕು ಎಂಬುವಷ್ಟು ಬಲವಾಗಿದೆ ಎಂದರು.
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…