ರಾಜ್ಯ

Pahalgam Terror Attack | ರಕ್ಷಣೆಗೆ ತೆರಳಿದ ಸಚಿವ ಸಂತೋಷ್‌ ಲಾಡ್‌ ಹೇಳಿದ್ದೇನು?

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ.

ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಬಳಿಕ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರ ಮತ್ತು ಸೂಚನೆಗಳು ಶ್ಲಾಘನೀಯ. ಪೊಲೀಸ್ ಅಧಿಕಾರಿ ಚೇತನ್ ಅವರ ಸಹಕಾರವೂ ಸ್ಮರಣೀಯ ಎಂದರು.

ಶೇ.99ರಷ್ಟು ನಮ್ಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಜಮು ಕಾಶ್ಮೀರದಿಂದ ಕನ್ನಡಿಗರ ಸಹಕಾರವೂ ಅವಿಸ್ಮರಣೀಯ. 177 ಕನ್ನಡಿಗರನ್ನು ಶ್ರೀನಗರದಿಂದ ಬೆಂಗಳೂರಿಗೆ ಕರೆತರಲಾಗಿದೆ. ಇನ್ನೂ ಕೆಲವರು ಜಮ್ಮು ಮತ್ತು ಕಟ್ರದಲ್ಲಿದ್ದಾರೆ. ಅವರಿಗೆ ಈಗಾಗಲೇ ಮಾರ್ಗದರ್ಶನ ನೀಡಲಾಗಿದ್ದು, ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚಿಸಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪ್ರವಾಸದ ಯೋಜನೆ ರೂಪಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿಯವರ ಸೂಚನೆಯಂತೆ ನಾನು ಯಶಸ್ವಿಯಾಗಿದ್ದೇನೆ. ಪಹಲ್ಗಾಮ್‍ನಲ್ಲಿ ದಾಳಿಯ ಬಳಿಕ ಅಲ್ಲಿನ ವಾತಾವರಣವನ್ನು ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ದುಗುಡ ವ್ಯಕ್ತಪಡಿಸಿದರು.

ಇದು ಅತ್ಯಂತ ಭಯಾನಕವಾದ ಅನುಭವ. ಹೆಣ್ಣುಮಕ್ಕಳ ಕಣ್ಣೆದುರೇ ಅವರ ಗಂಡನನ್ನು ಕೊಲ್ಲಲಾಗಿದೆ. ಆ ವೇಳೆ ಹೆಣ್ಣುಮಕ್ಕಳು ನಮನ್ನೂ ಕೊಲ್ಲಿ ಎಂದು ಪ್ರತಿರೋಧಿಸಿರುವ ಧೈರ್ಯ ಪ್ರದರ್ಶಿಸಿರುವುದು ವರ್ಣಿಸಲು ಸಾಧ್ಯವಿಲ್ಲ. ನಮ್ಮ ದೇಶದ ಹೆಣ್ಣು ಮಕ್ಕಳು ಮಾತ್ರ ಈ ರೀತಿ ಧೈರ್ಯ ಪ್ರದರ್ಶಿಸಲು ಸಾಧ್ಯ. ಇದನ್ನು ನಾನು ಕಣ್ಣಿನಲ್ಲಿ ನೇರವಾಗಿ ನೋಡಿಲ್ಲ. ಆದರೆ ಕೇಳಿ ತಿಳಿದುಕೊಂಡ ಪ್ರಕಾರ ಅತೀ ಘೋರವಾಗಿದೆ ಎಂದರು.

ಭದ್ರತಾ ಲೋಪದ ಬಗ್ಗೆ ಈ ಸಂದರ್ಭದಲ್ಲಿ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ನಾನು ರಾಜಕೀಯ ಬೆರೆಸಲು ಬಯಸುವುದಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಮಗ್ನನಾಗಿದ್ದೇನೆ. ನಮ್ಮ ಜೊತೆ 177 ಮಂದಿ ಬಂದಿದ್ದಾರೆ. ಉಳಿದ 13 ಮಂದಿ ಸಂಜೆಯ ವಿಮಾನದಲ್ಲಿ ಬರುತ್ತಾರೆ. ಬಾಕಿ ಇರುವವರು ನಾಳೆ ಬೆಳಿಗ್ಗೆ ವಿಮಾನದಲ್ಲಿ ಬರುತ್ತಾರೆ. ಎಲ್ಲರಿಗೂ ವಿಮಾನಗಳು ಬುಕ್ ಆಗಿವೆ ಎಂದು ತಿಳಿಸಿದರು.

ಪಾಕಿಸ್ತಾನಕ್ಕೆ ಭಾರತ ದೇಶ ತಕ್ಕ ಪ್ರತಿಕ್ರಿಯೆ ನೀಡಲಿದೆ. ಅದನ್ನು ಇಡೀ ಜಗತ್ತೇ ನೋಡುತ್ತದೆ. ನಮ್ಮ ಸೇನೆಯ ಸಾಮರ್ಥ್ಯ ಯಾವ ರೀತಿ ಉತ್ತರ ನೀಡಬೇಕು ಎಂಬುವಷ್ಟು ಬಲವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

2 mins ago

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

9 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

10 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

10 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

10 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

11 hours ago