ರಾಜ್ಯ

Pahalgam Terror Attack | ರಕ್ಷಣೆಗೆ ತೆರಳಿದ ಸಚಿವ ಸಂತೋಷ್‌ ಲಾಡ್‌ ಹೇಳಿದ್ದೇನು?

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ.

ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಬಳಿಕ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರ ಮತ್ತು ಸೂಚನೆಗಳು ಶ್ಲಾಘನೀಯ. ಪೊಲೀಸ್ ಅಧಿಕಾರಿ ಚೇತನ್ ಅವರ ಸಹಕಾರವೂ ಸ್ಮರಣೀಯ ಎಂದರು.

ಶೇ.99ರಷ್ಟು ನಮ್ಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಜಮು ಕಾಶ್ಮೀರದಿಂದ ಕನ್ನಡಿಗರ ಸಹಕಾರವೂ ಅವಿಸ್ಮರಣೀಯ. 177 ಕನ್ನಡಿಗರನ್ನು ಶ್ರೀನಗರದಿಂದ ಬೆಂಗಳೂರಿಗೆ ಕರೆತರಲಾಗಿದೆ. ಇನ್ನೂ ಕೆಲವರು ಜಮ್ಮು ಮತ್ತು ಕಟ್ರದಲ್ಲಿದ್ದಾರೆ. ಅವರಿಗೆ ಈಗಾಗಲೇ ಮಾರ್ಗದರ್ಶನ ನೀಡಲಾಗಿದ್ದು, ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚಿಸಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪ್ರವಾಸದ ಯೋಜನೆ ರೂಪಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿಯವರ ಸೂಚನೆಯಂತೆ ನಾನು ಯಶಸ್ವಿಯಾಗಿದ್ದೇನೆ. ಪಹಲ್ಗಾಮ್‍ನಲ್ಲಿ ದಾಳಿಯ ಬಳಿಕ ಅಲ್ಲಿನ ವಾತಾವರಣವನ್ನು ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ದುಗುಡ ವ್ಯಕ್ತಪಡಿಸಿದರು.

ಇದು ಅತ್ಯಂತ ಭಯಾನಕವಾದ ಅನುಭವ. ಹೆಣ್ಣುಮಕ್ಕಳ ಕಣ್ಣೆದುರೇ ಅವರ ಗಂಡನನ್ನು ಕೊಲ್ಲಲಾಗಿದೆ. ಆ ವೇಳೆ ಹೆಣ್ಣುಮಕ್ಕಳು ನಮನ್ನೂ ಕೊಲ್ಲಿ ಎಂದು ಪ್ರತಿರೋಧಿಸಿರುವ ಧೈರ್ಯ ಪ್ರದರ್ಶಿಸಿರುವುದು ವರ್ಣಿಸಲು ಸಾಧ್ಯವಿಲ್ಲ. ನಮ್ಮ ದೇಶದ ಹೆಣ್ಣು ಮಕ್ಕಳು ಮಾತ್ರ ಈ ರೀತಿ ಧೈರ್ಯ ಪ್ರದರ್ಶಿಸಲು ಸಾಧ್ಯ. ಇದನ್ನು ನಾನು ಕಣ್ಣಿನಲ್ಲಿ ನೇರವಾಗಿ ನೋಡಿಲ್ಲ. ಆದರೆ ಕೇಳಿ ತಿಳಿದುಕೊಂಡ ಪ್ರಕಾರ ಅತೀ ಘೋರವಾಗಿದೆ ಎಂದರು.

ಭದ್ರತಾ ಲೋಪದ ಬಗ್ಗೆ ಈ ಸಂದರ್ಭದಲ್ಲಿ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ನಾನು ರಾಜಕೀಯ ಬೆರೆಸಲು ಬಯಸುವುದಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಮಗ್ನನಾಗಿದ್ದೇನೆ. ನಮ್ಮ ಜೊತೆ 177 ಮಂದಿ ಬಂದಿದ್ದಾರೆ. ಉಳಿದ 13 ಮಂದಿ ಸಂಜೆಯ ವಿಮಾನದಲ್ಲಿ ಬರುತ್ತಾರೆ. ಬಾಕಿ ಇರುವವರು ನಾಳೆ ಬೆಳಿಗ್ಗೆ ವಿಮಾನದಲ್ಲಿ ಬರುತ್ತಾರೆ. ಎಲ್ಲರಿಗೂ ವಿಮಾನಗಳು ಬುಕ್ ಆಗಿವೆ ಎಂದು ತಿಳಿಸಿದರು.

ಪಾಕಿಸ್ತಾನಕ್ಕೆ ಭಾರತ ದೇಶ ತಕ್ಕ ಪ್ರತಿಕ್ರಿಯೆ ನೀಡಲಿದೆ. ಅದನ್ನು ಇಡೀ ಜಗತ್ತೇ ನೋಡುತ್ತದೆ. ನಮ್ಮ ಸೇನೆಯ ಸಾಮರ್ಥ್ಯ ಯಾವ ರೀತಿ ಉತ್ತರ ನೀಡಬೇಕು ಎಂಬುವಷ್ಟು ಬಲವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

16 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

1 hour ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

1 hour ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

1 hour ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago