ರಾಜ್ಯ

Pahalgam Terror Attack | ರಕ್ಷಣೆಗೆ ತೆರಳಿದ ಸಚಿವ ಸಂತೋಷ್‌ ಲಾಡ್‌ ಹೇಳಿದ್ದೇನು?

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ.

ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಬಳಿಕ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರ ಮತ್ತು ಸೂಚನೆಗಳು ಶ್ಲಾಘನೀಯ. ಪೊಲೀಸ್ ಅಧಿಕಾರಿ ಚೇತನ್ ಅವರ ಸಹಕಾರವೂ ಸ್ಮರಣೀಯ ಎಂದರು.

ಶೇ.99ರಷ್ಟು ನಮ್ಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಜಮು ಕಾಶ್ಮೀರದಿಂದ ಕನ್ನಡಿಗರ ಸಹಕಾರವೂ ಅವಿಸ್ಮರಣೀಯ. 177 ಕನ್ನಡಿಗರನ್ನು ಶ್ರೀನಗರದಿಂದ ಬೆಂಗಳೂರಿಗೆ ಕರೆತರಲಾಗಿದೆ. ಇನ್ನೂ ಕೆಲವರು ಜಮ್ಮು ಮತ್ತು ಕಟ್ರದಲ್ಲಿದ್ದಾರೆ. ಅವರಿಗೆ ಈಗಾಗಲೇ ಮಾರ್ಗದರ್ಶನ ನೀಡಲಾಗಿದ್ದು, ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚಿಸಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪ್ರವಾಸದ ಯೋಜನೆ ರೂಪಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿಯವರ ಸೂಚನೆಯಂತೆ ನಾನು ಯಶಸ್ವಿಯಾಗಿದ್ದೇನೆ. ಪಹಲ್ಗಾಮ್‍ನಲ್ಲಿ ದಾಳಿಯ ಬಳಿಕ ಅಲ್ಲಿನ ವಾತಾವರಣವನ್ನು ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ದುಗುಡ ವ್ಯಕ್ತಪಡಿಸಿದರು.

ಇದು ಅತ್ಯಂತ ಭಯಾನಕವಾದ ಅನುಭವ. ಹೆಣ್ಣುಮಕ್ಕಳ ಕಣ್ಣೆದುರೇ ಅವರ ಗಂಡನನ್ನು ಕೊಲ್ಲಲಾಗಿದೆ. ಆ ವೇಳೆ ಹೆಣ್ಣುಮಕ್ಕಳು ನಮನ್ನೂ ಕೊಲ್ಲಿ ಎಂದು ಪ್ರತಿರೋಧಿಸಿರುವ ಧೈರ್ಯ ಪ್ರದರ್ಶಿಸಿರುವುದು ವರ್ಣಿಸಲು ಸಾಧ್ಯವಿಲ್ಲ. ನಮ್ಮ ದೇಶದ ಹೆಣ್ಣು ಮಕ್ಕಳು ಮಾತ್ರ ಈ ರೀತಿ ಧೈರ್ಯ ಪ್ರದರ್ಶಿಸಲು ಸಾಧ್ಯ. ಇದನ್ನು ನಾನು ಕಣ್ಣಿನಲ್ಲಿ ನೇರವಾಗಿ ನೋಡಿಲ್ಲ. ಆದರೆ ಕೇಳಿ ತಿಳಿದುಕೊಂಡ ಪ್ರಕಾರ ಅತೀ ಘೋರವಾಗಿದೆ ಎಂದರು.

ಭದ್ರತಾ ಲೋಪದ ಬಗ್ಗೆ ಈ ಸಂದರ್ಭದಲ್ಲಿ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ನಾನು ರಾಜಕೀಯ ಬೆರೆಸಲು ಬಯಸುವುದಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಮಗ್ನನಾಗಿದ್ದೇನೆ. ನಮ್ಮ ಜೊತೆ 177 ಮಂದಿ ಬಂದಿದ್ದಾರೆ. ಉಳಿದ 13 ಮಂದಿ ಸಂಜೆಯ ವಿಮಾನದಲ್ಲಿ ಬರುತ್ತಾರೆ. ಬಾಕಿ ಇರುವವರು ನಾಳೆ ಬೆಳಿಗ್ಗೆ ವಿಮಾನದಲ್ಲಿ ಬರುತ್ತಾರೆ. ಎಲ್ಲರಿಗೂ ವಿಮಾನಗಳು ಬುಕ್ ಆಗಿವೆ ಎಂದು ತಿಳಿಸಿದರು.

ಪಾಕಿಸ್ತಾನಕ್ಕೆ ಭಾರತ ದೇಶ ತಕ್ಕ ಪ್ರತಿಕ್ರಿಯೆ ನೀಡಲಿದೆ. ಅದನ್ನು ಇಡೀ ಜಗತ್ತೇ ನೋಡುತ್ತದೆ. ನಮ್ಮ ಸೇನೆಯ ಸಾಮರ್ಥ್ಯ ಯಾವ ರೀತಿ ಉತ್ತರ ನೀಡಬೇಕು ಎಂಬುವಷ್ಟು ಬಲವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

5 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

6 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

7 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

8 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

8 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

9 hours ago