ರಾಜ್ಯ

ಭಯೋತ್ಪಾದಕ ದಾಳಿ ; ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ ಮುಸ್ಲಿಮರು ಪ್ರತಿ ದಿನ 10,000 ರೂ. ಸಂಪಾದನೆ ಮಾಡುತ್ತಿದ್ದೇವೆ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಈಗ ಪಾಕಿಸ್ತಾನ ಪ್ರೇರಿತವಾದ ಭಯೋತ್ಪಾದಕ ಸಂಘಟನೆ ಈ ಕೆಲಸ ಮಾಡಿರುವುದು ಖಂಡನೀಯ ಎಂದರು.

ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡಬೇಕು. ಜಾಮೀನು ಪಡೆದು ಹೊರಗೆ ಬಂದ ಭಯೋತ್ಪಾದಕರ ಮೇಲೆ ನಿಗಾ ವಹಿಸಬೇಕು. ಅಂಥವರನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ 28 ಹಿಂದೂಗಳು ಮೃತರಾಗಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗೆ ಇದೆ. ಪಾಪರ್‌ ಆಗಿರುವ ಪಾಕಿಸ್ತಾನವೇ ಈ ಕೃತ್ಯವನ್ನು ಮಾಡಿದೆ. ಜಮ್ಮು-ಕಾಶ್ಮೀರ ಎಂದರೆ ಪ್ರವಾಸೋದ್ಯಮದ ಕೇಂದ್ರ. ಇಲ್ಲಿ ಕೇಂದ್ರ ಸರ್ಕಾರದ ಕ್ರಮಗಳಿಂದ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ರೂಪಾಯಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದರು ಎಂದರು.

ಕನ್ನಡಿಗರಾದ ಭರತ್‌ ಭೂಷಣ್‌, ಮಂಜುನಾಥ್‌, ಮಧುಸೂಧನ್‌ ಈ ಘಟನೆಯಲ್ಲಿ ಮೃತರಾಗಿರುವುದು ದುಃಖಕರ. ವಿಷಯ ತಿಳಿದ ಕೂಡಲೇ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕರೆ ಮಾಡಿ ಕನ್ನಡಿಗರ ಸುರಕ್ಷತೆ ಬಗ್ಗೆ ವಿಚಾರಿಸಿದ್ದೇನೆ. ಉಳಿದ ಕನ್ನಡಿಗರ ಜೊತೆ ಸಂಪರ್ಕವೇರ್ಪಡಿಸಿ ಸಹಾಯ ನೀಡುವ ಬಗ್ಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ಸ್ಲೀಪರ್‌ ಸೆಲ್‌ಗಳು
ಭಯೋತ್ಪಾದಕರು ಮುಸ್ಲಿಮರನ್ನು ಮುಟ್ಟದೆ ಹಿಂದೂಗಳನ್ನೇ ಹುಡುಕಿ ಗುರಿ ಮಾಡಿ ಕೊಂದಿದ್ದಾರೆ. ಸ್ಥಳೀಯರು ಸ್ಲೀಪರ್‌ ಸೆಲ್‌ಗಳಾಗಿ ಇದಕ್ಕೆ ಬೆಂಬಲ ನೀಡಿದ್ದಾರೆ. ಕರ್ನಾಟಕ, ಬೆಂಗಳೂರಿನಲ್ಲೂ ಸ್ಲೀಪರ್‌ ಸೆಲ್‌ಗಳಿದ್ದಾರೆ. ಉಗ್ರರು ಬಂದಾಗ ಅವರಿಗೆ ವೋಟರ್‌ ಐಡಿ ಮಾಡಿಕೊಡುವ ದಂಧೆಯೂ ಇದೆ. ಇದು ಹಿಂದೂಗಳಿಗೆ ಎಚ್ಚರಿಕೆಯ ಗಂಟೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ. ಭಾರತ ಜಗತ್ತಿನಲ್ಲೇ ಬಲಿಷ್ಠ ಸೇನಾಪಡೆ ಹೊಂದಿದೆ ಎಂದರು.

ಬಿಜೆಪಿ ಕಚೇರಿ, ಜಯನಗರ ಶಾಪಿಂಗ್‌ ಕಾಂಪ್ಲೆಕ್ಸ್‌ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ಶ್ರದ್ಧಾಂಜಲಿ ಸಭೆ ನಡೆಸಲಿದೆ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಈಗ ತೋರಿಸಬೇಕಿದೆ. ಬಿಜೆಪಿಯ ಎಲ್ಲರೂ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಲಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

9 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

10 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

11 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

11 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

13 hours ago