ರಾಜ್ಯ

ರಸ್ತೆಯಲ್ಲಿ ಪಾಕ್‌ ಧ್ವಜ ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌.ಡಿ, ಭಯೋತ್ಪಾದನಾ ಕೃತ್ಯ ಖಂಡಿಸಿ, ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆಗಳು ನಡೆಸುತ್ತಿವೆ. ನಗರದಲ್ಲೂ ಕೆಲ ಕೆಲವರು ಅನುಮತಿ ಇಲ್ಲದೆ ಪಾಕಿಸ್ತಾನ ಧ್ವಜ ಅಂಟಿಸಿರುವುದು ಕಂಡುಬಂದಿದೆ. ಸದ್ಯಕ್ಕೆ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ 6 ಮಂದಿ ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಚ್ಚರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago