ರಾಜ್ಯ

ಅರಮನೆ ಟಿ.ಡಿ.ಆರ್ ಪ್ರಕರಣ: 1996ರ ಕಾನೂನಿನ ಸಿಂಧುತ್ವದ ಬಗ್ಗೆ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ ೧೯೯೭ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಈ ಹಿಂದೆ  ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು ೧೯೯೭ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು.

ಸರ್ವೋಚ್ಛ ನ್ಯಾಯಾಲಯವು 2024ರ ಡಿಸೆಂಬರ್‌ 10 ರ  ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ೧೫ ಎಕರೆ ೧೭.೫ ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು. ನ್ಯಾಯಾಂಗ ನಿಂದನೆ ಅರ್ಜಿಯ ವಿಷಯದಲ್ಲಿ ಕಾನೂನಿನ ಪ್ರಕಾರ ಅಗತ್ಯ ಕ್ರಮ ವಹಿಸಲು ಸಚಿವ ಸಂಪುಟವು ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಿತು.

ಸರ್ವೋಚ್ಛ ನ್ಯಾಯಾಲಯದ 2024ರ ಡಿಸೆಂಬರ್‌ 21 ರ  ಆದೇಶಾನುಸಾರ ರೂ.೨,೮೩,೫೦೦ ಪ್ರ.ಚ.ಮೀಟರ್‌ಗೆ (ಬಳ್ಳಾರಿ ರಸ್ತೆ) ಮತ್ತು ರೂ.೨,೦೪,೦೦೦ ಪ್ರ.ಚ.ಮೀಟರ್‌ಗೆ ವನ್ನು (ಜಯಮಹಲ್ ರಸ್ತೆ) ಮೌಲ್ಯದಂತೆ ಟಿ.ಡಿ.ಆರ್ ವನ್ನು ನೀಡಲು ಅಂದಾಜು ರೂ.೩೦೧೧.೦೦ ಕೋಟಿಗಳ ಆರ್ಥಿಕ ಹೊರೆ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ಸಹ ಅದನ್ನು ತಿರಸ್ಕರಿಸಲಾಗಿರುತ್ತದೆ.
ಅಲ್ಲದೇ, ಮಾನ್ಯ ಸರ್ವೋಚ್ಛ ನ್ಯಾಯಾಲಯದ ೨೦೦೧ರ ಆದೇಶವನ್ನು ಉಲ್ಲಂಘಿಸಿ ಸುಮಾರು ಬೆಂಗಳೂರು ಅರಮನೆಯ ೨ ಲಕ್ಷ ಚ.ಮೀಟರ್ ವ್ಯಾಪ್ತಿಯಲ್ಲಿ ಖಾಯಂ ಕಟ್ಟಡಗಳನ್ನು ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲು ಸಹ ಸಚಿವ ಸಂಪುಟ ತೀರ್ಮಾನಿಸಿದೆ. ೧೫ ದಿನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ  ಸರ್ಕಾರದ ವತಿಯಿಂದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಇಂತಹ ಸ್ಥಳದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರದಿಂದ ಇನ್ನೂಮುಂದೆ ಅನುಮತಿ ನೀಡಲು ಸಚಿವ ಸಂಪುಟ ನಿರ್ಬಂಧ ವಿಧಿಸಿದೆ.

ಕರ್ನಾಟಕ ರಾಜ್ಯವು ಬೆಂಗಳೂರು ಅರಮನೆ (ಭೂಸ್ವಾಧಿನ ಮತ್ತು ವರ್ಗಾವಣೆ) ಅಧಿನಿಯಮ, ೧೯೯೬ ಎಂದು ಕರೆಯಲ್ಪಡುವ ಶಾಸನವನ್ನು ಅಧಿನಿಯಮಿಸಿ  ಬೆಂಗಳೂರು ಅರಮನೆಗೆ ಸೇರಿದ ಎಲ್ಲಾ ಸ್ಥಿರ ಚರ ಸ್ವತ್ತುಗಳ (ಕಾಯ್ದೆಯಲ್ಲಿ ನಿರ್ಧಿಷ್ಟಪಡಿಸಲಾದ ಸ್ವತ್ತುಗಳು) ಎಲ್ಲಾ ವಿಧವಾದ ಹಕ್ಕು ರಾಜ್ಯ ಸರ್ಕಾರದಲ್ಲಿ ವಿಹಿತವಾಗುತ್ತದೆ ಎಂದು ತಿಳಿಸಲಾಗಿತ್ತು. ಈ ಅಧಿನಿಯಮವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ: ೩೩೮೩/೧೯೯೭ ರಲ್ಲಿ ಮತ್ತು ಇತರೆ ಸಂಬಂಧಿತ ವಿಷಯಗಳಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಂದೆ ಪ್ರಶ್ನಿಸಿದ ಸಂದರ್ಭದಲ್ಲಿ ರಾಜ್ಯದ ಶಾಸನದ ಮಾನ್ಯತೆಯನ್ನು ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ರಾಜ್ಯ ಉಚ್ಛ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ವಿಶೇಷ ಅನುಮತಿ ಅರ್ಜಿ (ಸಿವಿಲ್) ಸಂಖ್ಯೆ: ೮೬೫೦/೧೯೯೭ ರಲ್ಲಿ ಮತ್ತು ಇತರೆ ಸಂಬಂಧಿತ ವಿಷಯಗಳಲ್ಲಿ  ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಸರ್ವೋಚ್ಛ ನ್ಯಾಯಾಲಯವು ಈ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ. ಈ ಅರ್ಜಿ ವಿಲೆವಾರಿ ಆಗುವವರೆಗೆ ಮಾಲಿಕತ್ವ ಪ್ರಶ್ನೆಯು ಇತ್ಯರ್ಥವಾಗುವವರೆಗೆ ಟಿ.ಡಿ.ಆರ್ ಪ್ರಕರಣವನ್ನು ಕಾನೂನು ಪ್ರಕಾರ ನಿರ್ವಹಿಸಲು ಸಚಿವ ಸಂಪುಟ ನಿರ್ದೇಶಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

49 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

54 mins ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

59 mins ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

6 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

7 hours ago