ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯಲ್ಲೂ ಇಂದು ಗದ್ದಲ-ಕೋಲಾಹಲ ಉಂಟಾಯಿತು.
ಸದನದಲ್ಲಿ ಹಲವಾರು ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಎದ್ದು ನಿಂತು ಘೋಷಣೆಗಳನ್ನು ಕೂಗಲಾರಂಭಿಸಿದರು.
ಜೈಭೀಮ್, ನಮಗೆ ನ್ಯಾಯ ಬೇಕು ಮತ್ತು ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಿ ಎಂಬ ಘೋಷಣೆಗಳು ಮೊಳಗಿದವು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಸದನವನ್ನು ಅಲ್ಪಾವಧಿಗೆ ಮುಂದೂಡಿಕೆ ಮಾಡಿದರು.
ಇನ್ನು ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ವಿಧಾನಪರಿಷತ್ತಿನಲ್ಲೂ ಕೋಲಾಹಲ ಉಂಟಾಯಿತು.
ಆರಂಭದಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಈಗ ಅವಕಾಶ ನೀಡಲಾಗದು ಎಂದರು.
ಈ ವೇಳೆ ಪ್ರಶ್ನೋತ್ತರ ಅವಧಿಗೂ ಮುನ್ನ ಚರ್ಚೆ ನಡೆಸಿದರೆ ಒಳಿತು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಪಟ್ಟು ಹಿಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು, ಅಂಬೇಡ್ಕರ್ ಬದುಕಿದ್ದಾಗ ಯಾರು ಎಷ್ಟು ಅವಮಾನ ಮಾಡಿದ್ದಾರೆ. ಸತ್ತಾಗ ಯಾರು ಎಷ್ಟು ಅವಮಾನ ಮಾಡಿದ್ದಾರೆ ಎಂಬುದನ್ನು ಚರ್ಚಿಸೋಣ ಎಂದು ತಿರುಗೇಟು ನೀಡಿದರು.
ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಅಮಿತ್ ಶಾ ಅವರು ಅಂಬೇಡ್ಕರ್ರನ್ನು ಅವಮಾನಿಸಿಲ್ಲ. ಬದಲಿಗೆ ಕಾಂಗ್ರೆಸ್ ಹೇಗೆ ಅವಮಾನ ಮಾಡಿದೆ ಎಂದು ಹೇಳಿದ್ದಾರೆ ಎಂದರು.
ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ-ಕೋಲಾಹಲವೇ ಏರ್ಪಟ್ಟ ಘಟನೆ ನಡೆಯಿತು.
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…