ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯಲ್ಲೂ ಇಂದು ಗದ್ದಲ-ಕೋಲಾಹಲ ಉಂಟಾಯಿತು.
ಸದನದಲ್ಲಿ ಹಲವಾರು ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಎದ್ದು ನಿಂತು ಘೋಷಣೆಗಳನ್ನು ಕೂಗಲಾರಂಭಿಸಿದರು.
ಜೈಭೀಮ್, ನಮಗೆ ನ್ಯಾಯ ಬೇಕು ಮತ್ತು ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಿ ಎಂಬ ಘೋಷಣೆಗಳು ಮೊಳಗಿದವು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಸದನವನ್ನು ಅಲ್ಪಾವಧಿಗೆ ಮುಂದೂಡಿಕೆ ಮಾಡಿದರು.
ಇನ್ನು ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ವಿಧಾನಪರಿಷತ್ತಿನಲ್ಲೂ ಕೋಲಾಹಲ ಉಂಟಾಯಿತು.
ಆರಂಭದಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಈಗ ಅವಕಾಶ ನೀಡಲಾಗದು ಎಂದರು.
ಈ ವೇಳೆ ಪ್ರಶ್ನೋತ್ತರ ಅವಧಿಗೂ ಮುನ್ನ ಚರ್ಚೆ ನಡೆಸಿದರೆ ಒಳಿತು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಪಟ್ಟು ಹಿಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು, ಅಂಬೇಡ್ಕರ್ ಬದುಕಿದ್ದಾಗ ಯಾರು ಎಷ್ಟು ಅವಮಾನ ಮಾಡಿದ್ದಾರೆ. ಸತ್ತಾಗ ಯಾರು ಎಷ್ಟು ಅವಮಾನ ಮಾಡಿದ್ದಾರೆ ಎಂಬುದನ್ನು ಚರ್ಚಿಸೋಣ ಎಂದು ತಿರುಗೇಟು ನೀಡಿದರು.
ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಅಮಿತ್ ಶಾ ಅವರು ಅಂಬೇಡ್ಕರ್ರನ್ನು ಅವಮಾನಿಸಿಲ್ಲ. ಬದಲಿಗೆ ಕಾಂಗ್ರೆಸ್ ಹೇಗೆ ಅವಮಾನ ಮಾಡಿದೆ ಎಂದು ಹೇಳಿದ್ದಾರೆ ಎಂದರು.
ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ-ಕೋಲಾಹಲವೇ ಏರ್ಪಟ್ಟ ಘಟನೆ ನಡೆಯಿತು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…