ಬೆಂಗಳೂರು: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ಬಳಿಕ ಮೊದಲ ಬಾರಿಗೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿಲಿರುವ ನರೇಂದ್ರ ಮೋದಿ ಅವರಿಗೆ ರಾಜ್ಯ ಗೃಹಸಚಿವ ಡಾ. ಜಿ ಪರಮೇಶ್ವರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೋದಿ ಅವರಿಗೆ ಅಭಿನಂದನೆಗಳು. ಕಳೆದ 10 ವರ್ಷಗಳ ಬಿಜೆಪಿ ಅವಧಿಯಲ್ಲಿ ಜನರು ಸಾಕಷ್ಟು ತೊಂದರೆಗಳಿಗೆ ಈಡಾಗಿದ್ದಾರೆ. ಹಿಂದೆ ಏನೆಲ್ಲಾ ತಪ್ಪುಗಳನ್ನು ಮಾಡಿದ್ದಾರೆ ಎಂಬುದನ್ನು ಸರಿಪಡಿಸಿಕೊಳ್ಳುವ ಮೂಲಕ ಜನರ ದೃಷ್ಠಿಯಿಂದ ಕೆಲಸ ಮಾಡಬೇಕು. ಕರ್ನಾಟಕದ ಮಂತ್ರಿಗಳಿಗೆ ಹೆಚ್ಚಿನಸ ಸ್ಥಾನಮಾನ ಸಿಗುವಂತಾಗಬೇಕು.
ಈ ಹಿಂದೆ ರಾಜ್ಯದಿಂದ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್ ಸೇರಿ ಎಲ್ಲರೂ ವಿಫಲರಾಗಿದ್ದಾರೆ. ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯದಿಂದ ಹಲವು ಜನರು ಸಚಿವ ಸ್ಥಾನ ನಿರೀಕ್ಷೆಯಲಿದ್ದಾರೆ. ಈವರೆಗೆ ರಾಜ್ಯದಿಂದ ನೇಮಕಗೊಂಡ ಸಂಸದರು ರಾಜ್ಯದ ಹಿತ ಕಾಪಾಡುವಲ್ಲಿ ವಿಫಲಾಗಿದ್ದಾರೆ. ಬಿಜೆಪಿ ಸಂಸದರು ಯಾರು ಕೂಡಾ ಧನಿ ಎತ್ತಲಿಲ್ಲ. ನಮ್ಮ ನಿರೀಕ್ಷೆಯಂತೆ ಜನಪರ ಆಡಳಿತ ನೀಡಲಿ ಎಂದು ಅವರು ಆಶಿಸಿದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…