ರಾಜ್ಯ

ಪರಮೇಶ್ವರ್‌ ನನ್ನ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ ವಿಶೇಷವೇನೂ ಇಲ್ಲ. ಅವರು ಬಂದು ಚರ್ಚೆ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಕುತೂಹಲ ಕೆರಳಿಸಿದ ಭೇಟಿ: ಮಧ್ಯರಾತ್ರಿ ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವ ಕೆ.ಎನ್.ರಾಜಣ್ಣ ಇತ್ತೀಚೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡಿದ್ದರು. ಅದನ್ನು ಪದೇ ಪದೇ ಪುನರುಚ್ಚರಿಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರ ನಡುವೆ ಚರ್ಚೆಯಾಗಿದೆ. ಪರಮೇಶ್ವರ್‌ ಅವರು ತಮ್ಮ ಈ ಭೇಟಿಯ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಚರ್ಚೆ ಬಗ್ಗೆ ಬಹಿರಂಗ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago