ಬೆಂಗಳೂರು: ಹದಿನೈದು ಇಪ್ಪತ್ತು ದಿನಗಳಿಂದ ಆಗಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದಿಂದ ತೀವ್ರ ಬೇಸರವಾಗಿದೆ ಎಂದು ದರ್ಶನ್ ಪ್ರಕರಣ ಕುರಿತು ನಟಿ ರಕ್ಷಿತಾ ಪ್ರೇಮ್ ದಂಪತಿ ಬೇಸರ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನೋಡಲು ನಟಿ ರಕ್ಷಿತಾ ಹಾಗೂ ಡೈರೆಕ್ಟರ್ ಪ್ರೇಮ್ ಅವರು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದರು.
ಒಂದು ಗಂಟೆ ದರ್ಶನ್ ಜೊತೆ ಭೇಟಿ ಮುಗಿಸಿ ವಾಪಸ್ ಆದ ನಟರು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕಳೆದ ಹದಿನೈದು-ಇಪ್ಪತ್ತು ದಿನದಿಂದ ಆಗಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ. ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.
ಇನ್ನೂ ಜೈಲಿನಲ್ಲಿ ದರ್ಶನ್ ಜೊತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಅವರು, ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ನಿರ್ದೇಶಕ ಜೋಗಿ ಪ್ರೇಮ್ ಬೇಸರ ವ್ಯಕ್ತಪಡಿಸಿದರು.
ಇತ್ತ ಜೈಲಿನಲ್ಲಿರುವ ದರ್ಶನ್ರನ್ನು ನೋಡಲು ಜೈಲುವಾಸಿಗಳೇ ಹರಸಾಹಸ ಪಡುತ್ತಿದ್ದು, ಪದೇ ಪದೇ ಅನಾರೋಗ್ಯ ಸಮಸ್ಯೆ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿದಾಡುತ್ತಿದ್ದಾರೆ. ಹೀಗಾಗಿ ನಟ ದರ್ಶನ್ ಜೈಲು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದ್ದಾರೆ ಎನ್ನಲಾಗುತ್ತಿದೆ.
ನಟ ದರ್ಶನ್ ಜೈಲು ಸೇರಿದ ನಂತರ ಅವರ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಜೈಲಿಗೆ ಬಂದು ಅವರನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ. ಚಿತ್ರರಂಗದ ಸಹೋದ್ಯೋಗಿಗಳು, ದರ್ಶನ್ ಅವರಿಂದ ನೆರವು ಪಡೆದವರು ಹಾಗೂ ಅಭಿಮಾನಿಗಳು ದರ್ಶನ್ ನೋಡಲು ಜೈಲಿನತ್ತ ಬರುತ್ತಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…