ರಾಜ್ಯ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾಗಿದ್ದಾಳೆ.

ಬಸವನಗುಡಿಯ ಖಾಸಗಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ಪರಿಣಿತಾ ಬರೆದಿರುವ ಪುಸಕ್ತ ‘ಟೇಲ್ಸ್ ಬೈ ಪರಿ’. ಈಗ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಗೊಂಡಿದ್ದು, “ಯುವ ಲೇಖಕಿ” ಎಂಬ ಮನ್ನಣೆಯನ್ನೂ ತಂದುಕೊಟ್ಟಿದೆ.

ಪರಿಣಿತಾಳ ಮೊದಲ ಕಥಾ ಪುಸ್ತಕ ‘ಟೇಲ್ಸ್ ಬೈ ಪರಿ’ 2025ರ ಮಾರ್ಚ್ 8 ರಂದು ಲೋಕಾರ್ಪಣೆಗೊಂಡಿತ್ತು. ಸುಬ್ಬು ಪಬ್ಲಿಕೇಷನ್ಸ್ ಪ್ರಕಟಿಸಿದ್ದ ಪುಸ್ತಕವು ಪರಿಣಿತಾ ಅವರ ಪ್ರತಿಭೆ ಹಾಗೂ ಸಾಹಿತ್ಯ ಆಸಕ್ತಿಯನ್ನು ಗುರುತಿಸುವಂತೆ ಮಾಡಿತ್ತು, ಪರಿಣಿತಾ ಅವರನ್ನು ಶಿಕ್ಷಕರು ಹಾಗೂ ಅನೇಕ ಗಣ್ಯರು ಮೆಚ್ಚಿಕೊಂಡಿದ್ದಾರೆ.

ಸಾಹಿತ್ಯ ಓದು, ಬರಹದಲ್ಲಿ ಬಾಲ್ಯದಿಂದಲೇ ಆಸಕ್ತಿ ಬೆಳೆಸಿಕೊಂಡಿರುವ ಪರಿಣಿತಾ, ಸ್ವಂತಿಕೆ, ಅಭಿವ್ಯಕ್ತಿ ಮತ್ತು ಕಥೆ ಹೆಣೆಯುವಿಕೆಯಲ್ಲಿ ತನ್ನದೇ ಶೈಲಿಯನ್ನು ರೂಪಿಸಿಕೊಂಡಿದ್ದಾಳೆ. ಕಥಾ ಸಂಕಲ ‘ಟೇಲ್ಸ್ ಬೈ ಪರಿ’ ವ್ಯಕ್ತಿ-ವ್ಯಕ್ತಿತ್ವಗಳು ಹಾಗೂ ಸಮಾಜದ ಸೂಕ್ಷ್ಮಕಥೆಗಳನ್ನು ಹೇಳುತ್ತದೆ. 10 ವರ್ಷದ ಪರಿಣಿತಾಳ ಬರವಣಿಗೆ ಈಗ ದೇಶದ ಗಮನ ಸೆಳೆದಿದೆ, ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಪುಟಾಣಿ ಲೇಖಕಿ ಪರಿಣಿತಾ ಅವರ ಮಹತ್ವದ ಸಾಧನೆಗೆ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ನೀಡಿರುವ ಅಧಿಕೃತ ಮಾನ್ಯತೆ, ಅವರ ಕುಟುಂಬಕ್ಕೆ ಮಾತ್ರವಲ್ಲದೆ ಶಿಕ್ಷಣ ಕ್ಷೇತ್ರಕ್ಕೂ ಹೆಮ್ಮೆಯ ಕ್ಷಣವಾಗಿದೆ. ಲೇಖಕಿ, ಅಂಕಣಕಾರ್ತಿಯೂ ಆಗಿರುವ ದಂತ ವೈದ್ಯೆ ತಾಯಿ ಡಾ. ಅನುಷಾ ಆರ್. ಗುಪ್ತಾ, ಬೆಸ್ಕಾಂ ಅಧಿಕಾರಿ ತಂದೆ ಕೆ. ಬಾಲಾಜಿ ಅವರ ಪ್ರೋತ್ಸಾಹ ಮತ್ತು ಬೆಂಬಲದೊಂದಿಗೆ, ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸದಾ ಪ್ರೋತ್ಸಾಹ ನೀಡುತ್ತಿರುವ ಶಾಲೆಯ ಶಿಕ್ಷಕರ ಪಾತ್ರವೂ ಮಹತ್ವದಾಗಿದೆ.

ಪರಿಣಿತಾ ಸಾಧನೆಯು ಪುಟ್ಟ ಮಿನುಗು ನಕ್ಷತ್ರದಂತೆ ಹೊಳೆಯುತ್ತಿದ್ದು, ಇನ್ನಷ್ಟು ಮಕ್ಕಳಿಗೆ ತಮ್ಮದೇ ಕಥೆ ಹೇಳಲು, ಕವಿತೆ ಬರೆಯಲು ಸ್ಪೂರ್ತಿ ನೀಡಲಿದೆ ಎಂದರೆ ತಪ್ಪಾಗಲಾರದು. ಸೂಕ್ತ ಮಾರ್ಗದರ್ಶನ, ನಿರಂತರ ಪ್ರೋತ್ಸಾಹ ಮತ್ತು ಪರಿಶ್ರಮವಿದ್ದರೆ ಬಾಲ್ಯದಲ್ಲಿಯೇ ಅಸಾಧಾರಣ ಸಾಧನೆಗಳನ್ನು ಮಾಡಬಹುದು ಎಂಬುದಕ್ಕೆ ಪರಿಣಿತಾ ಬಿ. ಅತ್ಯುತ್ತಮ ಉದಾಹರಣೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago