ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.
ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ಗೆ 30 ಮತಗಳು
ಕಾಂಗ್ರೆಸ್ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
ಕಾಂಗ್ರೆಸ್ನ ಪಿ.ವಿ.ಮೋಹನ್ಗೆ 29 ಮತಗಳು
ಕಾಂಗ್ರೆಸ್ನ ಬಿ.ಎಸ್.ಶಿವಣ್ಣಗೆ 30 ಮತಗಳು
ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತ
ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್ಗೆ 27 ಮತಗಳು
ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ ಸಿಕ್ಕಿದೆ.
ಒಂದು ಮತ ಅಸಿಂಧು
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…