ರಾಜ್ಯ

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.

ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
ಕಾಂಗ್ರೆಸ್​​ನ ಬಿ.ಕೆ. ಹರಿಪ್ರಸಾದ್​​ಗೆ 30 ಮತಗಳು
ಕಾಂಗ್ರೆಸ್​ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
ಕಾಂಗ್ರೆಸ್​ನ ಪಿ.ವಿ.ಮೋಹನ್​ಗೆ 29 ಮತಗಳು
ಕಾಂಗ್ರೆಸ್​ನ ಬಿ.ಎಸ್.ಶಿವಣ್ಣಗೆ 30 ಮತಗಳು
ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತ
ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್​ಗೆ 27 ಮತಗಳು

ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್​.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್​ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್​ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್​ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ ಸಿಕ್ಕಿದೆ.

ಒಂದು ಮತ ಅಸಿಂಧು
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

10 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

10 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago