ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.
ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ಗೆ 30 ಮತಗಳು
ಕಾಂಗ್ರೆಸ್ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
ಕಾಂಗ್ರೆಸ್ನ ಪಿ.ವಿ.ಮೋಹನ್ಗೆ 29 ಮತಗಳು
ಕಾಂಗ್ರೆಸ್ನ ಬಿ.ಎಸ್.ಶಿವಣ್ಣಗೆ 30 ಮತಗಳು
ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತ
ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್ಗೆ 27 ಮತಗಳು
ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ ಸಿಕ್ಕಿದೆ.
ಒಂದು ಮತ ಅಸಿಂಧು
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…