ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.
ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ಗೆ 30 ಮತಗಳು
ಕಾಂಗ್ರೆಸ್ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
ಕಾಂಗ್ರೆಸ್ನ ಪಿ.ವಿ.ಮೋಹನ್ಗೆ 29 ಮತಗಳು
ಕಾಂಗ್ರೆಸ್ನ ಬಿ.ಎಸ್.ಶಿವಣ್ಣಗೆ 30 ಮತಗಳು
ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತ
ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್ಗೆ 27 ಮತಗಳು
ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ ಸಿಕ್ಕಿದೆ.
ಒಂದು ಮತ ಅಸಿಂಧು
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…