ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಇಲ್ಲಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.
ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ ಆರ್ಥಿಕ ಅಸಮಾನತೆ ನಿರ್ಮಾಣವಾಗಿರುವುದು. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…