ಬೆಂಗಳೂರು: 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಾರೆಂಟ್ ಜಾರಿಯಾಗಿದೆ.
ಈ ಬೆನ್ನಲ್ಲೇ ಇಂದು (ಶುಕ್ರವಾರ, ಜೂನ್.14) ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಗೃಹಸ ಸಚಿವ ಡಾ. ಜಿ ಪರಮೇಶ್ವರ್ ಅವರು, ಮಾಜಿ ಸಿಎಂ ಯಡಿಯೂರಪ್ಪನವರು ಆದಷ್ಟು ಬೇಗ ಬಂದರೆ ಒಳ್ಳೆಯದು, ಇಲ್ಲವಾದಲ್ಲಿ ಪೊಲೀಸರೇ ಕರೆದುಕೊಂಡು ಬರುತ್ತಾರೆ ಎಂದು ಹೇಳಿದ್ದಾರೆ.
ಬಿಎಸ್ವೈ ಅವರ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. ಅವರ ಬಳಿ ಪೊಲೀಸರು ಮಾಹಿತಿ ಪಡೆಯಲಿದ್ದಾರೆ ಬಳಿಕ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಿದ್ದಾರೆ. ಸದ್ಯ ದಹಲಿಯಲ್ಲಿರುವ ಬಿಎಸ್ವೈ ಅವರು ಸೋಮವಾರ ಬರೋದಾಗಿ ಹೇಳಿದ್ದಾರೆ ಎಂದರು.
ರಾಹುಲ್ ಗಾಂಧಿಯವರನ್ನು ಜಾಹೀರಾತು ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ಕಾಂಗ್ರೆಸ್ ಬಿಎಸ್ವೈ ವಿರುದ್ಧ ಷಡ್ಯಂತರ ರೂಪಿಸುತ್ತಿದೆ ಎಂದು ಬಿಜೆಪಿ ದೂರಿರುವ ಸಂಬಂಧ. ಅವರು ಸುಮ್ಮನೇ ಕಥೆ ಕಟ್ಟುತ್ತಾರೆ. ಈ ವಿಚಾರಕ್ಕೂ ರಾಹುಲ್ ಗಾಂಧಿಗೂ ಏನು ಸಂಬಂಧ ಹೇಳಿ? ಈ ಪ್ರಕರಣದಲ್ಲಿ ರಾಹುಲ್ ಪಾತ್ರವೇನು ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ನಟ ದರ್ಶನ್ಗೆ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ, ಯಾರಿಗೂ ಯಾವುದೇ ರಾಜಾತಿಥ್ಯ ನೀಡಿಲ್ಲ. ತನಿಖೆ ಮಾಡಲು ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದರು. ಜತೆಗೆ ಬಿರಿಯಾನಿ ನೀಡಿದ ವಿಷಯಕ್ಕೆ ನಾವು ಎಲ್ಲರನ್ನು ಆರೋಪಿಗಳನ್ನಾಗಿಯೇ ನೋಡಿದ್ದೇವೆ, ಯಾರಿಗೂ ಬಿರಿಯಾನಿ ನೀಡಿಲ್ಲ ಎಂದಿದ್ದಾರೆ, ವಿಚಾರಣೆ ವಿಚಾರದಲ್ಲಿ ನಮಗೆ ಯಾವುದರ ಬಗೆಯೂ ಮುಲಾಜಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…