ಬೆಂಗಳೂರು: 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಾರೆಂಟ್ ಜಾರಿಯಾಗಿದೆ.
ಈ ಬೆನ್ನಲ್ಲೇ ಇಂದು (ಶುಕ್ರವಾರ, ಜೂನ್.14) ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಗೃಹಸ ಸಚಿವ ಡಾ. ಜಿ ಪರಮೇಶ್ವರ್ ಅವರು, ಮಾಜಿ ಸಿಎಂ ಯಡಿಯೂರಪ್ಪನವರು ಆದಷ್ಟು ಬೇಗ ಬಂದರೆ ಒಳ್ಳೆಯದು, ಇಲ್ಲವಾದಲ್ಲಿ ಪೊಲೀಸರೇ ಕರೆದುಕೊಂಡು ಬರುತ್ತಾರೆ ಎಂದು ಹೇಳಿದ್ದಾರೆ.
ಬಿಎಸ್ವೈ ಅವರ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. ಅವರ ಬಳಿ ಪೊಲೀಸರು ಮಾಹಿತಿ ಪಡೆಯಲಿದ್ದಾರೆ ಬಳಿಕ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಿದ್ದಾರೆ. ಸದ್ಯ ದಹಲಿಯಲ್ಲಿರುವ ಬಿಎಸ್ವೈ ಅವರು ಸೋಮವಾರ ಬರೋದಾಗಿ ಹೇಳಿದ್ದಾರೆ ಎಂದರು.
ರಾಹುಲ್ ಗಾಂಧಿಯವರನ್ನು ಜಾಹೀರಾತು ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ಕಾಂಗ್ರೆಸ್ ಬಿಎಸ್ವೈ ವಿರುದ್ಧ ಷಡ್ಯಂತರ ರೂಪಿಸುತ್ತಿದೆ ಎಂದು ಬಿಜೆಪಿ ದೂರಿರುವ ಸಂಬಂಧ. ಅವರು ಸುಮ್ಮನೇ ಕಥೆ ಕಟ್ಟುತ್ತಾರೆ. ಈ ವಿಚಾರಕ್ಕೂ ರಾಹುಲ್ ಗಾಂಧಿಗೂ ಏನು ಸಂಬಂಧ ಹೇಳಿ? ಈ ಪ್ರಕರಣದಲ್ಲಿ ರಾಹುಲ್ ಪಾತ್ರವೇನು ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ನಟ ದರ್ಶನ್ಗೆ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ, ಯಾರಿಗೂ ಯಾವುದೇ ರಾಜಾತಿಥ್ಯ ನೀಡಿಲ್ಲ. ತನಿಖೆ ಮಾಡಲು ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದರು. ಜತೆಗೆ ಬಿರಿಯಾನಿ ನೀಡಿದ ವಿಷಯಕ್ಕೆ ನಾವು ಎಲ್ಲರನ್ನು ಆರೋಪಿಗಳನ್ನಾಗಿಯೇ ನೋಡಿದ್ದೇವೆ, ಯಾರಿಗೂ ಬಿರಿಯಾನಿ ನೀಡಿಲ್ಲ ಎಂದಿದ್ದಾರೆ, ವಿಚಾರಣೆ ವಿಚಾರದಲ್ಲಿ ನಮಗೆ ಯಾವುದರ ಬಗೆಯೂ ಮುಲಾಜಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…