ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.
ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು
ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು.
ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆ. ಬೆಳಗಾವಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಮಹಾತ್ಮಗಾಂಧೀಜಿ ಅಧ್ಯಕ್ಷತೆಯ ಅಧಿವೇಶನದ 100 ವರ್ಷಾಚರಣೆಯ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಂಪುಟ ಪುನಾರಚನೆ ಕಪೋಲ ಕಲ್ಪಿತ
ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡಗೆ ಬಿಟ್ಟಿದ್ದು, ವಿಷಯ ಚರ್ಚೆ ಮಾಡುವಂತದ್ದಲ್ಲ ಎಂದು ಸಚಿವರು ತಿಳಿಸಿದರು.
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…