ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.
ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು
ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು.
ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆ. ಬೆಳಗಾವಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಮಹಾತ್ಮಗಾಂಧೀಜಿ ಅಧ್ಯಕ್ಷತೆಯ ಅಧಿವೇಶನದ 100 ವರ್ಷಾಚರಣೆಯ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಂಪುಟ ಪುನಾರಚನೆ ಕಪೋಲ ಕಲ್ಪಿತ
ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡಗೆ ಬಿಟ್ಟಿದ್ದು, ವಿಷಯ ಚರ್ಚೆ ಮಾಡುವಂತದ್ದಲ್ಲ ಎಂದು ಸಚಿವರು ತಿಳಿಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…