ಬೆಂಗಳೂರು: ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವರು ಹಾಗೂ ಅರಣ್ಯಾಧಿಕಾರಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರ ಖಂಡ್ರೆ ಅವರ ಮನದ ಭಾವನೆಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ತೆಲುಗು ಮತ್ತು ಕನ್ನಡ ಭಾಷೆಯ ಲಿಪಿಯಲ್ಲಿ ಸಾಮ್ಯತೆ ಇದೆ ಎಂದ ಅವರು ರಾಷ್ಟ್ರಕವಿ ಕುವೆಂಪು ಅವರ “ಅರಣ್ಯಕ್ಕೆ ಹಾಡು ಹಾಡುವ ಮುನ್ನ ನಾನು ನನ್ನ ಮನದ ಮುಂದೆ ನಿಲ್ಲುತ್ತೇನೆ” ಎಂಬ ಸಾಲುಗಳನ್ನು ಉಲ್ಲೇಖಿಸಿ ತಮಗೆ ಈ ಸಭೆಯಿಂದ ಕನ್ನಡ ಕಲಿಯುವ ಪ್ರೇರಣೆ ಲಭಿಸಿದೆ ಎಂದರು.
ಚಿತ್ರನಟರು ಆದ ಅವರು ಕನ್ನಡದ ಮೇರು ನಟ ಡಾ. ರಾಜಕುಮಾರ್ ಅವರ ಗಂಧದಗುಡಿ ಚಿತ್ರದ ಉಲ್ಲೇಖ ಮಾಡಿ ಅರಣ್ಯ ಸಂರಕ್ಷಣೆ ಸಂದೇಶ ಸಾರಿದ ಚಿತ್ರ ಎಂದರು.
ಶ್ರೀಶೈಲ ಮತ್ತು ತಿರುಪತಿಯಲ್ಲಿ ಕರ್ನಾಟಕದ ಭಕ್ತಾದಿಗಳಿಗೆ ಅನುಕೂಲತೆ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿಯೂ ಸಹಾ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…