ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚನೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನಲ್ಲಿದ್ದಾರೆ.





