ರಾಜ್ಯ

ಪವಿತ್ರಗೌಡ ದರ್ಶನ ಪತ್ನಿ ಅಲ್ಲ: ಪೊಲೀಸ್‌ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಅವರು ಆಪ್ತರು ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ಗಂಡ-ಹೆಂಡತಿ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

2003 ರ ಮೇ ತಿಂಗಳಲ್ಲಿ ನಾನು ಮತ್ತು ದರ್ಶನ್‌ ಧರ್ಮಸ್ಥಳದಲ್ಲಿ ಕಾನೂನಾತ್ಮಕವಾಗಿ ಮದುವೆ ಹಾಗಿದ್ದೇವೆ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ. ಹಾಗೆಯೇ ಪವಿತ್ರಗೌಡ ಹಾಗೂ ಸಂಜಯ್‌ಸಿಂಗ್‌ ಎಂಬುವವರು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ ಎಂದು ಪತ್ರದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಉಲ್ಲೇಖಿಸಿದ್ದಾರೆ.

ನೀವು ಮಾಧ್ಯಗೋಷ್ಠಿಯಲ್ಲಿ ದರ್ಶನ್‌ ಹೆಂಡತಿ ಪವಿತ್ರಗೌಡ ಅಂತ ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯಮದವರು ಕೂಡ ಅದನ್ನೇ ಹೇಳಿದರು. ರೇಣುಕಾಸ್ವಾಮಿ ಕೊಲೆ ಕೇಸ್‌ದಲ್ಲಿ ದರ್ಶನ್‌ ದಂಪತಿ ಅರೆಸ್ಟ್ ಅಂತ ಸುದ್ದಿ ಮಾಡಿದರು. ಇದರಿಂದಾಗಿ ನಾನು ಮತ್ತು ನನ್ನ ಮಗ ವಿನೀಶ್‌ ಮುಂದಿನ ದಿನಗಳಲಿ ತೊಂದರೆ ಅನುಭವಿಸುವಂತೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಪೊಲೀಸ್‌ ದಾಖಲೆಯಲ್ಲಿ ಪವಿತ್ರಗೌಡ ದರ್ಶನ್‌ ಅವರ ಪತ್ನಿ ಎಂದು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

4 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

6 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

7 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

10 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

12 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

13 hours ago