ಬೆಂಗಳೂರು: ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಅವರು ಆಪ್ತರು ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ಗಂಡ-ಹೆಂಡತಿ ಅಲ್ಲ ಎಂದು ನಗರ ಪೊಲೀಸ್ ಆಯುಕ್ತರಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.
2003 ರ ಮೇ ತಿಂಗಳಲ್ಲಿ ನಾನು ಮತ್ತು ದರ್ಶನ್ ಧರ್ಮಸ್ಥಳದಲ್ಲಿ ಕಾನೂನಾತ್ಮಕವಾಗಿ ಮದುವೆ ಹಾಗಿದ್ದೇವೆ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ. ಹಾಗೆಯೇ ಪವಿತ್ರಗೌಡ ಹಾಗೂ ಸಂಜಯ್ಸಿಂಗ್ ಎಂಬುವವರು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ ಎಂದು ಪತ್ರದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಉಲ್ಲೇಖಿಸಿದ್ದಾರೆ.
ನೀವು ಮಾಧ್ಯಗೋಷ್ಠಿಯಲ್ಲಿ ದರ್ಶನ್ ಹೆಂಡತಿ ಪವಿತ್ರಗೌಡ ಅಂತ ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯಮದವರು ಕೂಡ ಅದನ್ನೇ ಹೇಳಿದರು. ರೇಣುಕಾಸ್ವಾಮಿ ಕೊಲೆ ಕೇಸ್ದಲ್ಲಿ ದರ್ಶನ್ ದಂಪತಿ ಅರೆಸ್ಟ್ ಅಂತ ಸುದ್ದಿ ಮಾಡಿದರು. ಇದರಿಂದಾಗಿ ನಾನು ಮತ್ತು ನನ್ನ ಮಗ ವಿನೀಶ್ ಮುಂದಿನ ದಿನಗಳಲಿ ತೊಂದರೆ ಅನುಭವಿಸುವಂತೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಪೊಲೀಸ್ ದಾಖಲೆಯಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…