ರಾಜ್ಯ

ಅರಣ್ಯ ಸಂರಕ್ಷಣೆ- ಈಶ್ವರ ಖಂಡ್ರೆ ಕಾರ್ಯಕ್ಕೆ ಪವನ್ ಕಲ್ಯಾಣ್ ಮೆಚ್ಚುಗೆ

ಬೆಂಗಳೂರು: ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವರು ಹಾಗೂ ಅರಣ್ಯಾಧಿಕಾರಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರ ಖಂಡ್ರೆ ಅವರ ಮನದ ಭಾವನೆಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ತೆಲುಗು ಮತ್ತು ಕನ್ನಡ ಭಾಷೆಯ ಲಿಪಿಯಲ್ಲಿ ಸಾಮ್ಯತೆ ಇದೆ ಎಂದ ಅವರು ರಾಷ್ಟ್ರಕವಿ ಕುವೆಂಪು ಅವರ “ಅರಣ್ಯಕ್ಕೆ ಹಾಡು ಹಾಡುವ ಮುನ್ನ ನಾನು ನನ್ನ ಮನದ ಮುಂದೆ ನಿಲ್ಲುತ್ತೇನೆ” ಎಂಬ ಸಾಲುಗಳನ್ನು ಉಲ್ಲೇಖಿಸಿ ತಮಗೆ ಈ ಸಭೆಯಿಂದ ಕನ್ನಡ ಕಲಿಯುವ ಪ್ರೇರಣೆ ಲಭಿಸಿದೆ ಎಂದರು.

ಚಿತ್ರನಟರು ಆದ ಅವರು ಕನ್ನಡದ ಮೇರು ನಟ ಡಾ. ರಾಜಕುಮಾರ್ ಅವರ ಗಂಧದಗುಡಿ ಚಿತ್ರದ ಉಲ್ಲೇಖ ಮಾಡಿ ಅರಣ್ಯ ಸಂರಕ್ಷಣೆ ಸಂದೇಶ ಸಾರಿದ ಚಿತ್ರ ಎಂದರು.

ಶ್ರೀಶೈಲ ಮತ್ತು ತಿರುಪತಿಯಲ್ಲಿ ಕರ್ನಾಟಕದ ಭಕ್ತಾದಿಗಳಿಗೆ ಅನುಕೂಲತೆ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

4 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

5 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

5 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

5 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

5 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

5 hours ago